12:40 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು