3:26 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು