12:49 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

09/01/2025, 10:47

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು.


ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ.
ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಿಗೂ ಸ್ವಂತ ಸೂರು ಹೊಂದುವ ಆಕಾಂಕ್ಷೆ ಇರುತ್ತದೆ. ನಿಮ್ಮ ಸಮಸ್ಯೆ ಕುರಿತಾಗಿ ಪಾಲಿಕೆ ಸದಸ್ಯರಲ್ಲಿ ತಿಳಿಸಿ ಹಕ್ಕು ಪತ್ರಕ್ಕೆ ಮನವಿ ಮಾಡಿದ ಮೇರೆಗೆ ಖಾಸಗೀ ಜಮೀನು ಖರೀದಿಸಲು ಸೂಚಿಸಿ ಅದರಂತೆ ನೀವು ವಾಸ ಮಾಡುತ್ತಿದ್ದ ಜಾಗ ನಿಮ್ಮದಾಗಿದೆ.ಅ„ಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ .ನಿಮ್ಮ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಮೇಯರ್ ಮನೋಜ್ ಕುಮಾರ್ ,ವಿಪಕ್ಷ ನಾಯಕ ಅನಿಲ್ ಕುಮಾರ್ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ಮೇಯರ್ ಬಾನುಮತಿ, ಸ್ಥಾಯೀ ಸಮಿತಿ ಸದಸ್ಯರಾದ ವೀಣಾ ಮಂಗಳ, ಸುಮಿತ್ರ ಕರಿಯ, ಸರಿತ ಶಶಿಧರ್,ಶ್ವೇತ ಪೂಜಾರಿ, ನಯನ ಆರ್ ಕೋಟ್ಯಾನ್, ವೇದಾವತಿ, ಲಕ್ಷ್ಮೀ ಶೇಖರ್ ದೇವಾಡಿಗ, ವರುಣ್ ಚೌಟ,ಶೋಭಾ ರಾಜೇಶ್,ಪಾಲಿಕೆ ಅ„ಕಾರಿಗಳಾದ ವಿಭಾಗೀಯ ಆಯುಕ್ತ ಗುರುಪ್ರಸಾದ್, ಚಿತ್ತರಂಜನ್, ಮಾಲಿನಿ ರೋಡ್ರಿಗಸ್,ಸುಲತ,ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು