7:13 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

09/01/2025, 10:47

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು.


ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ.
ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಿಗೂ ಸ್ವಂತ ಸೂರು ಹೊಂದುವ ಆಕಾಂಕ್ಷೆ ಇರುತ್ತದೆ. ನಿಮ್ಮ ಸಮಸ್ಯೆ ಕುರಿತಾಗಿ ಪಾಲಿಕೆ ಸದಸ್ಯರಲ್ಲಿ ತಿಳಿಸಿ ಹಕ್ಕು ಪತ್ರಕ್ಕೆ ಮನವಿ ಮಾಡಿದ ಮೇರೆಗೆ ಖಾಸಗೀ ಜಮೀನು ಖರೀದಿಸಲು ಸೂಚಿಸಿ ಅದರಂತೆ ನೀವು ವಾಸ ಮಾಡುತ್ತಿದ್ದ ಜಾಗ ನಿಮ್ಮದಾಗಿದೆ.ಅ„ಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ .ನಿಮ್ಮ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಮೇಯರ್ ಮನೋಜ್ ಕುಮಾರ್ ,ವಿಪಕ್ಷ ನಾಯಕ ಅನಿಲ್ ಕುಮಾರ್ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ಮೇಯರ್ ಬಾನುಮತಿ, ಸ್ಥಾಯೀ ಸಮಿತಿ ಸದಸ್ಯರಾದ ವೀಣಾ ಮಂಗಳ, ಸುಮಿತ್ರ ಕರಿಯ, ಸರಿತ ಶಶಿಧರ್,ಶ್ವೇತ ಪೂಜಾರಿ, ನಯನ ಆರ್ ಕೋಟ್ಯಾನ್, ವೇದಾವತಿ, ಲಕ್ಷ್ಮೀ ಶೇಖರ್ ದೇವಾಡಿಗ, ವರುಣ್ ಚೌಟ,ಶೋಭಾ ರಾಜೇಶ್,ಪಾಲಿಕೆ ಅ„ಕಾರಿಗಳಾದ ವಿಭಾಗೀಯ ಆಯುಕ್ತ ಗುರುಪ್ರಸಾದ್, ಚಿತ್ತರಂಜನ್, ಮಾಲಿನಿ ರೋಡ್ರಿಗಸ್,ಸುಲತ,ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು