5:51 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

09/01/2025, 10:47

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು.


ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ.
ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಿಗೂ ಸ್ವಂತ ಸೂರು ಹೊಂದುವ ಆಕಾಂಕ್ಷೆ ಇರುತ್ತದೆ. ನಿಮ್ಮ ಸಮಸ್ಯೆ ಕುರಿತಾಗಿ ಪಾಲಿಕೆ ಸದಸ್ಯರಲ್ಲಿ ತಿಳಿಸಿ ಹಕ್ಕು ಪತ್ರಕ್ಕೆ ಮನವಿ ಮಾಡಿದ ಮೇರೆಗೆ ಖಾಸಗೀ ಜಮೀನು ಖರೀದಿಸಲು ಸೂಚಿಸಿ ಅದರಂತೆ ನೀವು ವಾಸ ಮಾಡುತ್ತಿದ್ದ ಜಾಗ ನಿಮ್ಮದಾಗಿದೆ.ಅ„ಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ .ನಿಮ್ಮ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಮೇಯರ್ ಮನೋಜ್ ಕುಮಾರ್ ,ವಿಪಕ್ಷ ನಾಯಕ ಅನಿಲ್ ಕುಮಾರ್ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ಮೇಯರ್ ಬಾನುಮತಿ, ಸ್ಥಾಯೀ ಸಮಿತಿ ಸದಸ್ಯರಾದ ವೀಣಾ ಮಂಗಳ, ಸುಮಿತ್ರ ಕರಿಯ, ಸರಿತ ಶಶಿಧರ್,ಶ್ವೇತ ಪೂಜಾರಿ, ನಯನ ಆರ್ ಕೋಟ್ಯಾನ್, ವೇದಾವತಿ, ಲಕ್ಷ್ಮೀ ಶೇಖರ್ ದೇವಾಡಿಗ, ವರುಣ್ ಚೌಟ,ಶೋಭಾ ರಾಜೇಶ್,ಪಾಲಿಕೆ ಅ„ಕಾರಿಗಳಾದ ವಿಭಾಗೀಯ ಆಯುಕ್ತ ಗುರುಪ್ರಸಾದ್, ಚಿತ್ತರಂಜನ್, ಮಾಲಿನಿ ರೋಡ್ರಿಗಸ್,ಸುಲತ,ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು