11:37 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

09/01/2025, 17:09

ಬೆಂಗಳೂರು (reporterkarnataka.com): ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ. ಅದರ ಉತ್ತೇಜನಕ್ಕೆ ಜ‌. 23-25ರ ವರಗೆ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಬೆಂಗಳೂರು ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯ ನಗರ. ಇಲ್ಲಿ ಎಲ್ಲಾ ತರದ ತಿನಿಸು ಲಭ್ಯ. ಅದರೆ ನಮ್ಮ ಕರ್ನಾಟಕದ ಆಹಾರಗಳ ಸತ್ವ ಮತ್ತು ಸವಿಯನ್ನು ಉಣ ಬಡಿಸುತ್ತಾ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ ನಳಪಾಕ ಹೋಟೆಲ್ ನ ಯಶಸ್ಸು ಅಭಿನಂದನೀಯ ಎಂದು ಚಲುವರಾಯಸ್ವಾಮಿ ಹೇಳಿದರು.
ಸಂಕ್ರಾಂತಿ ರೈತರ ಸಂಭ್ರಮ ಹಂಚಿಕೆಯ ಸುಗ್ಗಿ ಹಬ್ಬ . ಈ ಬಾರಿ ಜ 14ರಂದು ನಾಗಮಂಗಲ ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ವಿಶೇಷ ಸಂಕ್ರಾಂತಿ ಕಾರ್ಯಕ್ರಮ‌ ಆಯೋಜಿಸಿದ್ದು ರೈತಾಪಿ ಕುಟುಂಬದೊಂದಿಗೆ ಒಂದು ದಿನ ಕಾಲಕಳೆಯಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.
ಮಾಜಿ ಸಚಿವರು ಹಾಗೂ ಶಾಸಕರಾದ ಗೋಪಾಲಯ್ಯ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು