4:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

09/01/2025, 17:09

ಬೆಂಗಳೂರು (reporterkarnataka.com): ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ. ಅದರ ಉತ್ತೇಜನಕ್ಕೆ ಜ‌. 23-25ರ ವರಗೆ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಬೆಂಗಳೂರು ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯ ನಗರ. ಇಲ್ಲಿ ಎಲ್ಲಾ ತರದ ತಿನಿಸು ಲಭ್ಯ. ಅದರೆ ನಮ್ಮ ಕರ್ನಾಟಕದ ಆಹಾರಗಳ ಸತ್ವ ಮತ್ತು ಸವಿಯನ್ನು ಉಣ ಬಡಿಸುತ್ತಾ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ ನಳಪಾಕ ಹೋಟೆಲ್ ನ ಯಶಸ್ಸು ಅಭಿನಂದನೀಯ ಎಂದು ಚಲುವರಾಯಸ್ವಾಮಿ ಹೇಳಿದರು.
ಸಂಕ್ರಾಂತಿ ರೈತರ ಸಂಭ್ರಮ ಹಂಚಿಕೆಯ ಸುಗ್ಗಿ ಹಬ್ಬ . ಈ ಬಾರಿ ಜ 14ರಂದು ನಾಗಮಂಗಲ ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ವಿಶೇಷ ಸಂಕ್ರಾಂತಿ ಕಾರ್ಯಕ್ರಮ‌ ಆಯೋಜಿಸಿದ್ದು ರೈತಾಪಿ ಕುಟುಂಬದೊಂದಿಗೆ ಒಂದು ದಿನ ಕಾಲಕಳೆಯಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.
ಮಾಜಿ ಸಚಿವರು ಹಾಗೂ ಶಾಸಕರಾದ ಗೋಪಾಲಯ್ಯ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು