7:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

09/01/2025, 17:09

ಬೆಂಗಳೂರು (reporterkarnataka.com): ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ. ಅದರ ಉತ್ತೇಜನಕ್ಕೆ ಜ‌. 23-25ರ ವರಗೆ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಬೆಂಗಳೂರು ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯ ನಗರ. ಇಲ್ಲಿ ಎಲ್ಲಾ ತರದ ತಿನಿಸು ಲಭ್ಯ. ಅದರೆ ನಮ್ಮ ಕರ್ನಾಟಕದ ಆಹಾರಗಳ ಸತ್ವ ಮತ್ತು ಸವಿಯನ್ನು ಉಣ ಬಡಿಸುತ್ತಾ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ ನಳಪಾಕ ಹೋಟೆಲ್ ನ ಯಶಸ್ಸು ಅಭಿನಂದನೀಯ ಎಂದು ಚಲುವರಾಯಸ್ವಾಮಿ ಹೇಳಿದರು.
ಸಂಕ್ರಾಂತಿ ರೈತರ ಸಂಭ್ರಮ ಹಂಚಿಕೆಯ ಸುಗ್ಗಿ ಹಬ್ಬ . ಈ ಬಾರಿ ಜ 14ರಂದು ನಾಗಮಂಗಲ ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ವಿಶೇಷ ಸಂಕ್ರಾಂತಿ ಕಾರ್ಯಕ್ರಮ‌ ಆಯೋಜಿಸಿದ್ದು ರೈತಾಪಿ ಕುಟುಂಬದೊಂದಿಗೆ ಒಂದು ದಿನ ಕಾಲಕಳೆಯಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.
ಮಾಜಿ ಸಚಿವರು ಹಾಗೂ ಶಾಸಕರಾದ ಗೋಪಾಲಯ್ಯ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು