11:53 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು