3:07 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ

09/01/2025, 23:18

ಕೊಟ್ಟಿಗೆಹಾರ(reporterkarnataka.com):ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಡಕೋಟ ಬಸ್ ಗಳ ಸಂಖ್ಯೆ ಹೆಚ್ಚಾಗಿ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ಆತಂಕ್ಕೀಡಾಗುವಂತಾಗಿದೆ. ಬಯಲುಸೀಮೆ ಭಾಗದಲ್ಲಿ ಬಸ್ ಕೆಟ್ಟು ನಿಂತರೆ ಭಯಬೀಳುವ ಅಗತ್ಯವಿಲ್ಲ. ಆದರೆ, ಮಲೆನಾಡಲ್ಲಿ, ಅದರಲ್ಲೂ ಕಾಡಿನ ಮಾರ್ಗದಲ್ಲಿ ಬಸ್ ಕೆಟ್ಟರೆ ಜನ ಆತಂಕಕ್ಕೀಡಾಗಬೇಕಾಗುತ್ತದೆ. ಇಂದು ಕೂಡ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಚಾರ್ಮಾಡಿ ಘಾಟಿಯಂತಹಾ ದಟ್ಟ ಕಾನನದ ಮಧ್ಯೆ ಕೆಟ್ಟು ನಿಂತಿದ್ದು ಸಾರ್ವಜನಿಕರ ಆಕ್ರೋಶ-ಆತಂಕಕ್ಕೆ ಕಾರಣವಾಗಿದೆ.
ಚಾರ್ಮಾಡಿ ಘಾಟಿ ದಟ್ಟ ಕಾನನದ ಮಾರ್ಗ. ಈ ಮಾರ್ಗದ ಸಂಚಾರ ಹಗಲು-ರಾತ್ರಿ ಎರಡೂ ಹೊತ್ತಲ್ಲೂ ಕಷ್ಟ ಹಾಗೂ ಆತಂಕವೇ ಸರಿ. ಯಾಕಂದ್ರೆ, ಚಾರ್ಮಾಡಿ ಘಾಟಿಯಲ್ಲಿ ಹಗಲು-ರಾತ್ರಿ ಎನ್ನದೆ ಎಲ್ಲೆಂದರಲ್ಲಿ, ಯಾವಾಗೆಂದರೆ ಆವಾಗ ಕಾಡಾನೆ ಹಾವಳಿ ಇದೆ. ಕೆಲವರು ಜಸ್ಟ್ ಮಿಸ್ ಆಗಿದ್ದಾರೆ. ಕೆಲವರು ಗಾಡಿ ವಾಪಸ್ ತಿರುಗಿಸಿದ್ದಾರೆ. ಕೆಲವರು ಗಂಟೆ-ಗಂಟೆಗಟ್ಟಲೇ ನಿಂತಲ್ಲೇ ನಿಂತಿದ್ದಾರೆ. ಇಂತಹಾ ಅಪಾಯದ ರಸ್ತೆಯಲ್ಲಿ ಸರ್ಕಾರಿ ಬಸ್ ಕೆಟ್ಟು ನಿಂತಿದ್ದು ಜನ ಗ್ಯಾರಂಟಿ ಸರ್ಕಾರದ ವಾರಂಟಿ ಇಲ್ಲದ ಬಸ್ ಸಂಚಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿಮ್ಮ ಉಚಿತ ಬಸ್ ಸೌಲಭ್ಯ ಬೇಡ. ಸರ್ಕಾರಿ ಬಸ್ ಗಳಿಗೆ ಕಾಯಕಲ್ಪ ಕಲ್ಪಿಸಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ. ರಸ್ತೆ ಮಧ್ಯೆ ಬಸ್ ಗಳು ಕೆಟ್ಟು ನಿಂತರೆ ಈಗ ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸಬೇಕಾಗುತ್ತೆ. ಏಕೆಂದರೆ, ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಬಸ್ ಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದೆ ಮತ್ತೊಂದು ಬಸ್ ಬಂದರೂ ಫುಲ್ ರಷ್ ಇರಲಿದೆ. ಆ ಬಸ್ಸಿಗೆ ಮತ್ತೊಂದು ಬಸ್ಸಿನ ಜನ ಹತ್ತಿಸಲು ಆಗಲ್ಲ. ಹಾಗಾಗಿ, ರಸ್ತೆ ಮಧ್ಯೆ ಸರ್ಕಾರಿ ಬಸ್ ಗಳು ಕೆಟ್ಟು ನಿಂತರೆ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಲಿದ್ದು, ಸರ್ಕಾರ ಸರ್ಕಾರಿ ಬಸ್ ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಭಾಗ್ಯವನ್ನ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು