6:52 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಜ.14: ಸ್ವರ ಸಂಕ್ರಾಂತಿ ಉತ್ಸವ-2025, ‘ಸ್ವರ ಸಾಧನಾ’ ಪ್ರಶಸ್ತಿ ಪ್ರದಾನ

11/01/2025, 17:54

ಮಂಗಳೂರು(reporterkarnataka.com): ಸ್ವರಾಲಯ ಸಾಧನಾ ಫೌಂಡೇಶನ್‌ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ವರ ಸಂಕ್ರಾಂತಿ ಉತ್ಸವ-2025 ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಜರುಗಲಿದೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ವಯಲನಿಸ್ಟ್ ವಿಶ್ವಾಸ್ ಕೃಷ್ಣ ಈ ಕುರಿತು ಮಾಹಿತಿ ನೀಡಿದರು.
ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ
ಕಾರ್ಯಕ್ರಮ ಹಾಗೂ ಮೂವರು ಹಿರಿಯ ಸಾಧಕರಿಗೆ ‘ಸ್ವರ ಸಾಧನಾ’ ಪ್ರಶಸ್ತಿ ಪ್ರದಾನ ನಡೆಯಲಿದೆ, ಸಂಜೆ 5 ಗಂಟೆಯಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತದ ಪ್ರಖ್ಯಾತ ಕಲಾವಿದರಾದ ರಂಜನಿ- ಗಾಯತ್ರಿ ಅವರಿಂದ ವಿಶಿಷ್ಟ ಪರಿಕಲ್ಪನೆಯ `ರಸ ಬೈರಾಗ’ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ವಿಠಲ್ ರಂಗಲ್, ಮೃದಂಗದಲ್ಲಿ ವಿದ್ವಾನ್ ಸಾಯಿ ಗಿರಿಧರ್, ಘಟಂನಲ್ಲಿ ವಿದ್ವಾನ್ ಎಸ್.ಕೃಷ್ಣ ಸಹಕರಿಸಲಿದ್ದಾರೆ.
ನಿಡಸೋಸಿ ಶ್ರೀ ದುರದುಂಡೀಶ್ವರ ಮಠದ ಜಗದ್ಗುರು ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಹಾಗೂ ಬಾಳೆಕುದ್ರು ಮಠದ ಶ್ರೀಮದ್‌
ಜಗದ್ಗುರು ಶ್ರೀ ವಾಸುದೇವ ಸದಾಶಿವಾಶ್ರಮ ಮಹಾಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಾಸಕ ವೇದವ್ಯಾಸ್ ಕಾಮತ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹಾಗೂ ಸ್ವರ ರತ್ನ ವಿದ್ವಾನ್ ವಿಶಲ್ ರಾಮಮೂರ್ತಿ ಭಾಗವಹಿಸಲಿದ್ದಾರೆ.
ಪ್ರಸಿದ್ಧ ಮೃದಂಗ ವಾದಕ ವಿದ್ವಾನ್ ನೈಬಿ ಪ್ರಭಾಕರ ಶೃಂಗೇರಿ ಮತ್ತು ಸಂಗೀತ ಕ್ಷೇತ್ರದ ಸಾಧಕಿ ವಿದುಷಿ ಸಾವಿತ್ರಿ ಪ್ರಭಾಕರ್
ದಂಪತಿ, ಭರತನಾಟ್ಯ ಕ್ಷೇತ್ರದ ಸಾಧಕಿ, ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯಗುರು ವಿದುಷಿ ಶಾರದಾ ಮಣಿಶೇಖರ್ ‌
ಹಾಗೂ ಮೃದಂಗದ ಸಾಧಕರಾದ ವಿದ್ವಾನ್ ಕುಂಜೂರು ಎಚ್.ರವಿಕುಮಾರ್ ಅವರಿಗೆ ಸ್ವರ ಸಾಧನಾ ಪ್ರಶಸ್ತಿ ಪ್ರದಾನ
ಕಾರ್ಯಕ್ರಮ ನಡೆಯಲಿದೆ.
ಸಂಗೀತ ಪ್ರೇಮಿಗಳು ಪ್ರವೇಶ ಪತ್ರದ ಮೂಲಕ ಉಚಿತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಪ್ರವೇಶ ಪತ್ರವನ್ನು ಪತ್ತುಮುಡಿ ಹೋಟೆಲ್ ಜನತಾ ಡಿಲಕ್ಸ್ ಸಮೀಪದ ತಕ್ವಿಲಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಎ1 ಲಾಜಿಕ್ಸ್ ಸಂಸ್ಥೆಯ ಕಚೇರಿಯಿಂದ ಪಡೆಯಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಶ್ರೀಕೃಷ್ಣ ನೀರಮೂಲೆ, ರಮೇಶ್, ಶ್ರೇಷ್ಠ ಲಕ್ಷ್ಮಿ, ಡಾ.ಸುಮಾ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು