5:32 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಹರೈನ್: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ನೂತನ ಸಮಿತಿಯ ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ

11/01/2025, 21:31

ಆರೀಫ್ ಯು‌.ಆರ್. ಬಹರೈನ್

info.reporterkarnataka@gmail.com

ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶೀವರಾಜ್ ತಂಗಡಿಗಿ ಅವರು ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನಮ್ಮ ಕರ್ನಾಟಕ ರಾಜ್ಯ ಹಾಗೂ ಬಹರೈನ್ ದೇಶಕ್ಕೂ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಬಹರೈನ್ ದೇಶದಲ್ಲಿ ಕನ್ನಡ ಬರಹಗಳು ಹಾಗೂ ಬಾವುಟ ಕಾಣಲು ಸಾಧ್ಯ. ನಾನು ಬಹರೈನ್ ದೇಶದ ರಾಜನಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕನ್ನಡ ಭಾಷೆ ಸಂಸ್ಕೃತಿ ಉಳಿವಿಗೆ ಅನಿವಾಸಿ ಕನ್ನಡಿಗರ ಕೊಡಿಗೆ ಅಪಾರವಾದುದು ಎಂದು ಹೇಳಿದರು.
ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ನಾಯ್ಕ್ ವರ್ಕಾಡಿ, ಪ್ರ.ಕಾರ್ಯದರ್ಶಿಯಾಗಿ ರೋಶನ್ ಲೆವೀಸ್, ಕಾರ್ಯದರ್ಶಿಯಾಗಿ ವಿಟ್ಲ ಜಮಾಲುದ್ದೀನ್, ಕೋಶಾಧಿಕಾರಿಯಾಗಿ ಮಂಗೇಶ್ ದೆಸೈ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ್ ಮಾಣಿಲ, ಸಾರ್ವಜನಿಕ ಸಂಬಂಧ ಕಾರ್ಯದರ್ಶಿಯಾಗಿ ಅಬ್ದುಲ್ ಜವಾದ್ ಪಾಷ, ಸದಸ್ಯರಾಗಿ ಸುಜಯ್ ಪಿಂಟೋ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಮೈಸೂರು ಮರ್ಚೆಂಟ್‌ ಕಂಪನಿಯ ಅಧ್ಯಕ್ಷ ಡಾ. ಎಚ್.ಎಸ್ ಶೆಟ್ಟಿ ಮುಖ್ಯ ಅತಿಥಿಯಾಗಿ ‌ಭಾಗವಹಿಸಿ ಮಾತನಾಡಿ ಸರಕಾರಿ‌ ಹಾಗೂ ಅನುದಾನಿತ ಕನ್ನಡ ಶಾಲೆಗಳನ್ನು ಸರಕಾರವೇ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತಿಸುತ್ತಿದೆ. ಇದರ ಪರಿಣಾಮವಾಗಿ ಮುಂದಿನ ಮೂವತ್ತು ವರ್ಷಗಳಲ್ಲಿ ಕನ್ನಡ ಮಾತನಾಡುವ ಜನರು ಸಿಗಬಹುದು ಹೊರತು ಕನ್ನಡ ಬರೆಯ ಬಲ್ಲ ವ್ಯಕ್ತಿ ಸಿಗುವುದು ಕಷ್ಟ ಸಾಧ್ಯ ಎಂದು ಹೇಳಿದರು.
ಅಲ್-ಅಲೀಲ್ ಆಸ್ಪತ್ರೆಯ ಉಪಾಧ್ಯಕ್ಷ ಅಸೀಫ್ ಮೊಹಮ್ಮದ್, ಸೌಂದರ್ಯ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಮಂಜಪ್ಪ ಪೂವಪ್ಪ, ಎಚ್.ಪಿ.ಆರ್ ಗ್ರೂಪ್ ಆಫ್ ಎಜ್ಯುಕೇಶನಲ್ ಇನಸ್ಟಿಟ್ಯೂಟ್ ನ ಅಧ್ಯಕ್ಷ ಹರಿಪ್ರಸಾದ್ ರೈ, ಮಂಗಳೂರಿನ ಎಕ್ಸ್ ಪಟ್೯ ವಿದ್ಯಾಸಂಸ್ಥೆ ಸ್ಥಾಪಕ ಸಿ.ಎ ಎಸ್.ಎಸ್ ನಾಯಕ್, ಚಲನಚಿತ್ರ ನಟಿ ನವ್ಯ ಪೂಜಾರಿ, ಕರ್ನಾಟಕ ಸೋಶಿಯಲ್ ಕ್ಲಬ್ ಅಧ್ಯಕ್ಷ ಅನಂದ್ ಲೋಬೋ, ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ನ ಸಲಹೆಗಾರ ಆಸ್ಟೀನ್ ಸಂತೋಷ್ ಹಳೆಯಂಗಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.


ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಅಧ್ಯಕ್ಷ ರಾಜ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ನ ಪ್ರ.ಕಾರ್ಯದರ್ಶಿ ರೋಶನ್ ಲೆವೀಸ್ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ್ ಮಾಣಿಲ ವಂದಿಸಿದರು.
ಜಾನ್ವೀ ಮಹಾದಿ ಕಾರ್ಯಕ್ರಮ ನಿರೂಪಿಸಿದರು.
ಗೋಪಿ, ಅಶೋಕ್ ಬಸ್ತಿ, ರಾಘವೇಂದ್ರ ಬಸ್ತಿ, ಅಶೋಕ್ ಪೊಳಲಿ, ಭಾಗ್ಯಶ್ರೀ ಮುಲುವಾಲಿ , ಜಯರಾಮ್ ಪ್ರಭು ರವರಿಂದ ಮಿಮಿಕ್ರಿ ‌ಹುಲಿಕುಣಿತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ‌ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು