4:33 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ರಾಜ್ಯದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸರಕಾರ ಗಂಭೀರ ಚಿಂತನೆ: ನರಿಂಗಾನ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ

11/01/2025, 23:59

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಗರ ಮಾತೃಭಾಷೆಯಾದ ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ಹೊರವಲಯದ ನರಿಂಗಾನದ ಮೋರ್ಲ-ಬೋಳದಲ್ಲಿ ಸ್ಪೀಕ‌ರ್ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ತೃತೀಯ ವರ್ಷದ ಹೊನಲು ಬೆಳಕಿನ ನರಿಂಗಾನ ಲವ- ಕುಶ ಜೋಡುಕರೆ ಕಂಬಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತುಳುವನ್ನು ರಾಜ್ಯದ ಎರಡನೇ ಭಾಷೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ರೈ ಒತ್ತಾಯಿಸಿದ್ದು, ಸರಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ. ಕರಾವಳಿಯಲ್ಲಿ ಎಲ್ಲ ಜಾತಿ, ಧರ್ಮದವರನ್ನು ಒಟ್ಟುಗೂಡಿಸಿ ನಡೆಯುವ ಕಂಬಳವು ಜಾತ್ಯತೀತ ಕ್ರೀಡೆಯಾಗಿದೆ ಎಂದು ಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದರು.
ರೈತರಿಗೆ ಸಾಕು ಪ್ರಾಣಿಗಳ ಜತೆ ಅವಿನಾಭಾವ ಸಂಬಂಧವಿದೆ. ಅದರ ಭಾಗವಾಗಿ ಕಂಬಳ ಕ್ರೀಡೆ ನಡೆಯುತ್ತಿದೆ. ರೈತರು ಕಂಬಳದ ಕೋಣಗಳನ್ನು ಬಹಳಷ್ಟು ಮುತುವರ್ಜಿ ವಹಿಸಿ ಸಾಕುತ್ತಾರೆ. ತುಳುವರು ಎಷ್ಟೇ ವಿದ್ಯಾವಂತರಾದರೂ ಕ್ರೀಡೆಯನ್ನ ಪ್ರೋತ್ಸಾಹಿಸುತ್ತಾರೆ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.
ಕಂಬಳ ಕ್ರೀಡೆಯನ್ನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಕಂಬಳಕ್ಕೆ ಸರಕಾರ 1.50 ಕೋಟಿ ರೂಪಾಯಿ ಅನುದಾನ, ರಾಜ್ಯದಲ್ಲಿ ನಡೆಯುವ 24 ಕಂಬಳಕ್ಕೆ ತಲಾ 5 ಲಕ್ಷ ರೂ. ಅನುದಾನವನ್ನು ನೀಡಿದೆ ಎಂದರು.
ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಜನರ ಆಶೀರ್ವಾದವಿದ್ದರೆ ಮಾತ್ರ
ಅಧಿಕಾರದಲ್ಲಿ ಉಳಿಯಬಹುದು ಎಂದು ಮುಖ್ಯಮಂತ್ರಿ ನುಡಿದರು.
ನಮ್ಮ ಪೂರ್ವಜರು ಪರಿಚಯಿಸಿದ ಕಂಬಳ ಸಂಸ್ಕೃತಿಯನ್ನು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಕಾರ್ಯ ನರಿಂಗಾನ ಕಂಬಳದ ಮೂಲಕ ನಡೆಯುತ್ತಿದೆ. ಆರ್ಥಿಕ ಕಷ್ಟವಿದ್ದರೂ ಕಂಬಳ ಪ್ರೇಮಿಗಳು ಕಂಬಳವನ್ನ ಕೈಬಿಟ್ಟಿಲ್ಲ. ಕಂಬಳ ಕ್ರೀಡೆಯು ಪ್ರಾಣಿಗಳಿಗೆ ಎಂದಿಗೂ ಹಿಂಸೆ ನೀಡಿಲ್ಲ, ಬದಲಾಗಿ ಪ್ರಾಣಿಗಳನ್ನ ಪ್ರೀತಿಸಲು ಕಲಿಸಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದ‌ರ್ ಹೇಳಿದರು.
ಕಂಬಳಕ್ಕೆ 5 ಲಕ್ಷ ಅನುದಾನ ಮತ್ತು ತಾನು ಪ್ರತಿನಿಧಿಸುತ್ತಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಖಾದ‌ರ್ ಅಭಿನಂದಿಸಿದರು.



ಕಂಬಳ ಕ್ಷೇತ್ರದ ಮಹನೀಯರಾದ ಗುಣಪಾಲ ಕಡಂಬ, ರಾಜೀವ ಶೆಟ್ಟಿ ಎತ್ತೂರು, ಅಪ್ಪು ಯಾನೆ ಜಾನ್ ಸಿರಿಲ್ ಡಿ ಸೋಜ, ಚಂದ್ರಹಾಸ್‌ ಶೆಟ್ಟಿ ಮೋರ್ಲ, ಚಿತ್ರನಟಿ ಸಾನ್ವಿ ಶ್ರೀವಾತ್ಸವ ಅವರನ್ನ ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಹೀಂ ಖಾನ್, ಕಾಸರಗೋಡು ಸಂಸದ ಉನ್ನಿತ್ತಾನ್, ಶಾಸಕರಾದ ಅಶೋಕ್ ರೈ, ಎಮ್ಮೆಲ್ಸಿಗಳಾದ ಮಂಜುನಾಥ್ ಭಂಡಾರಿ, ನಝೀರ್ ಅಹ್ಮದ್, ಐವನ್ ಡಿಸೋಜ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು