11:35 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗು

12/01/2025, 22:36

ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗಿದರು.
ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.
ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.
ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು