1:31 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

12/01/2025, 23:09

ಬೆಂಗಳೂರು(reporterkarnataka.com): ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ನೈಸ್ ಯೋಜನೆ ಹೆಸರಿನಲ್ಲಿ ರೈತರ ಭೂಮಿಯನ್ನು ಲೂಟಿ ಹೊಡೆಯಲಾಗಿದೆ. ಅಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು, ಕಾಂಗ್ರೆಸ್ ನಾಯಕರು ಎಲ್ಲಾ ಸೇರಿ ರೈತರ ಭೂಮಿಯನ್ನು ಕೊಳ್ಳೆ ಹೊಡೆದಿದ್ದಾರೆ.


22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ. ರಸ್ತೆ ಮಾಡುತ್ತೇವೆ ಎಂದು ಹೇಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನ ಸಮಿತಿ ಇಡೀ ಯೋಜನೆಯನ್ನೇ ಸರ್ಕಾರ ವಶಕ್ಕೆ ಪಡೆದು ಉನ್ನತ ತನಿಖೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು. ಹಾಗಿದ್ದರೂ ಈ ಸರ್ಕಾರ ಗಾಢನಿದ್ರೆಯಲ್ಲಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಎರಡು ತಿಂಗಳ ಒಳಗಾಗಿ ರೈತರಿಗೆ ಪರಿಹಾರ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 2019 ಏಪ್ರಿಲ್ 22ಕ್ಕೆ ಅನ್ವಯ ಆಗುವಂತೆ ರೈತರು ಕಳೆದುಕೊಂಡಿರುವ ಭೂಮಿಗೆ ಮಾರುಕಟ್ಟೆ ಮೌಲ್ಯ ನಿರ್ಧರಿಸಬೇಕು ಎಂದು ಕೋರ್ಟ್ ಆದೇಶ ಕೊಟ್ಟಿದೆ. ಸುಪ್ರೀಂ ಕೋರ್ಟ್ ಆದೇಶ ಬಂದು ಎಷ್ಟು ದಿನವಾಯಿತು. ಸದಾ ಎಂ.ಬಿ.ಪಾಟೀಲ್ ಅವರೇ ಏನು ಮಾಡುತ್ತಿದ್ದೀರಿ? ಪರಿಹಾರ ಕೊಡಿಸದೆ ಏನು ಮಾಡುತ್ತೀರಿ? ಎಂದು ಖಾರವಾಗಿ ಪ್ರಶ್ನೆ ಮಾಡಿದರು ಕುಮಾರಸ್ವಾಮಿ ಅವರು.
*ತೆರಿಗೆ ಪಾಲು; ಕಾಂಗ್ರೆಸ್ ಪಕ್ಷದ್ದೇ ತಪ್ಪು:*
ಕೇಂದ್ರ ಸರಕಾರದ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಐವತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಮಾಡಿರುವ ತಪ್ಪುಗಳೇ ಇದಕ್ಕೆಲ್ಲ ಕಾರಣ. ನೆಹರು ಅವರ ಕಾಲದಲ್ಲಿ ಹಣಕಾಸು ಆಯೋಗದ ಪರಿಕಲ್ಪನೆಯನ್ನು ಜಾರಿಗೆ ತಂದು ಅಲ್ಲಿಂದ ಆ ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ತೆರಿಗೆ ಪಾಲು ಕೊಡುವ ಪದ್ಧತಿ ಜಾರಿಗೆ ತರಲಾಯಿತು. ಈಗಲೂ ಅದೇ ಪದ್ಧತಿ ಆಧಾರದ ಮೇಲೆ ರಾಜ್ಯಕ್ಕೆ ತೆರಿಗೆ ಹಣವನ್ನು ಹಂಚಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ತೆರಿಗೆ ಅನ್ಯಾಯ ಎಂದು ಕೂಗಾಡುತ್ತಿರುವ ಕಾಂಗ್ರೆಸ್ಸಿಗರು, ಹಣಕಾಸು ಆಯೋಗದ ನಿಯಮಗಳಿಗೆ ತಿದ್ದುಪಡಿ ತಂದು ತೆರಿಗೆ ಹಂಚಿಕೆ ಪಾಲನ್ನು ಹೆಚ್ಚಿಸಿಕೊಳ್ಳಲು ಕ್ರಮ ವಹಿಸಬೇಕಿತ್ತು. ಮನಮೋಹನ್ ಸರಕಾರ ಹತ್ತು ವರ್ಷ ಇತ್ತು. ಆಗ ರಾಜ್ಯ ಕಾಂಗ್ರೆಸ್ ನಾಯಕರು ಏನು ಮಾಡುತ್ತಿದ್ದರು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು