1:14 PM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ

12/01/2025, 23:13

*ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು*

*ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನೆನ್ನಬೇಕು?*

ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ಹಸುಗಳ ಕೆಚ್ಚಲು ಕೊಯ್ದ ಘಟನೆ ಬಗ್ಗೆ ಬೆಳಗ್ಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯ ಸಮೇತ ವರದಿಗಳು ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಇದು ರಾಕ್ಷಸೀ ಕೃತ್ಯ. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಎಂಬುದಕ್ಕೆ ಇದುವೇ ಸಾಕ್ಷಿ. ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಹಸುವನ್ನು ನಾವು ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುತ್ತಿದ್ದೇವೆ. ಅಂಥ ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನನ್ನಬೇಕು? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಸಚಿವ ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿಣ ಕ್ರಮ ತಗೋಬೇಕು. ಅವರ ಬೆಣ್ಣೆ ಮಾತು ಇಲ್ಲಿ ನಡೆಯಲ್ಲ. ನಿಮ್ಮ ಡಿನ್ನರ್ ಮೀಟಿಂಗ್ ನಿಲ್ಸಿ, ಆಡಳಿತ ಸರಿ ಮಾಡೋದನ್ನು ನೋಡಿ. ಈ ಪ್ರಕರಣದ ಬಗೆ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇವರ ಸರಕಾರದ ಅವಧಿಯಲ್ಲಿ ರಾಕ್ಷಸೀ ಕೃತ್ಯ ಮೆರೆಯುವ ಇಂಥ ಜನರನ್ನು ಹೆಚ್ಚೆಚ್ಚು ಸೃಷ್ಟಿ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು