2:10 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ

13/01/2025, 15:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಆರಿದ್ರ ನಕ್ಷತ್ರದಲ್ಲಿ ಆಚರಿಸಿಕೊಂಡು ಬರುತ್ತಿರುವ ಅಂದಕಾಸುರ ವಧೆ ಆಚರಣೆ ನಡೆಯಿತು.
ಪಟ್ಟಣದ ರಾಕ್ಷಸಮಂಟಪ ವೃತ್ತದಲ್ಲಿ ಕಾರ್ಯಕ್ರಮ
ಆಯೋಜನೆ ಮಾಡಲಾಗಿತ್ತು.


ಅಂಧಕಾಸುರ ರಾಕ್ಷಸನನ್ನು ಹೋಲುವ ರಂಗೋಲಿ ಬಿಡಿಸಿ ಅದಕ್ಕೆ ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ರಿಂದ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಳಶ ಪೂಜೆ ಮಾಡಿ ಜೀವಕಳೆ ತುಂಬಿ ದಿಗ್ಬಂಧನ ಹಾಕಲಾಗುತ್ತದೆ.
ನಂತರ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಿಂದ ತಾಂಡವೇಶ್ವರ ಹಾಗೂ ಪಾರ್ವತಿದೇವಿ ಉತ್ಸವ ಮೂರ್ತಿಗಳ ಆಗಮನವಾಗುತ್ತದೆ.
ಉತ್ಸವ ಮೂರ್ತಿ ಹೊತ್ತು ತಂದ ಅರ್ಚಕರಿಂದ ಅಂಧಕಾಸುರನ ರಂಗೋಲಿ ಅಳಿಸಿ ಹಾಕುವ ಕಾರ್ಯ ನಡೆಯುತ್ತದೆ
ಇದಾದ ಬಳಿಕ ಬಂದ ಪಾರ್ವತಿದೇವಿ ಉತ್ಸವ ಮೂರ್ತಿಯಿಂದ ಸಮಾಧಾನ ಪಡಿಸವ ಆಚರಣೆ ಮಾಡಲಾಗುತ್ತದೆ. ಅಲ್ಲಿಂದ ಉತ್ಸವ ಮೂರ್ತಿ ತೆರಳಿದ ನಂತರ ಆವರಣಕ್ಕೆ ನುಗ್ಗಿ ರಂಗೋಲಿ ಅಳಿಸಿ ಹಾಕಿದ ಯುವಕರ ತಂಡ.
ಅಂಧಕಾಸುರನ ರಂಗೋಲಿ ತುಳಿಯುತ್ತಾ ಕುಣಿದು ಕುಪ್ಪಳಿಸಿದ ಯುವಕರು ಹಾಗೂ ಶ್ರೀ ನಂಜುಂಡಪ್ಪನ ಭಕ್ತರು.
ಅಂತಿಮವಾಗಿ ಯಾವುದೇ ತೊಂದರೆ ಇಲ್ಲದೇ ಮುಕ್ತಾಯಗೊಂಡ ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ.
ಕಳೆದ ವರ್ಷ ಮಹಿಷಾಸುರನ ಭಾವಚಿತ್ರ ಬಿಡಿಸಿ ನಡೆಯುತ್ತಿದ್ದ ಆಚರಣೆಯಲ್ಲಿ ಕೆಲವು ದಲಿತ ಸಂಘಟನೆಗಳು ಅಡ್ಡಿಪಡಿಸಿ ಸಂಘರ್ಷಕ್ಕೆ ಕಾರಣವಾಗಿತ್ತು
ಹಾಗಾಗಿ ಈ ಬಾರಿ ಎಚ್ಚರಿಕೆಯಿಂದ ಅಂಧಕಾಸುರನ ಚಿತ್ರವನ್ನೇ ಬಿಡಿಸಿ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನವಾಗಿ ನಡೆಯಿತು. ಕಳೆದ ವರ್ಷದ ಕಹಿ ಘಟನೆಯಿಂದಾಗಿ ಈ ಬಾರಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು