7:29 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕದ್ರಿ ದೇಗುಲದಲ್ಲಿ ಇಂದಿನಿಂದ ವರ್ಷಾವಧಿ ಜಾತ್ರೆ: 21ರಂದು ಮನ್ಮಹಾರಥೋತ್ಸವ, ಬೆಳ್ಳಿರಥೋತ್ಸವ, ಚಂದ್ರಮಂಡಲ ಉತ್ಸವ

13/01/2025, 18:57

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು ಇಂದಿನಿಂದ (ಜ.14) ಆರಂಭಗೊಳ್ಳಲಿದ್ದು,ಜನವರಿ 24ರ ವರೆಗೆ ನಡೆಯಲಿದೆ.
ವಾರ್ಷಿಕ ಮಹೋತ್ಸವವು ತಾ.13ರಂದು ರಾತ್ರಿ ಮಹಾಪೂಜೆಯ ಬಳಿಕ ಮುಹೂರ್ತ ಬಲಿ, ದೇವರ ಪ್ರಾರ್ಥನೆಯೊಂದಿಗೆ ತಂತ್ರಿಗಳ ಯಾಗಶಾಲಾ ಪ್ರವೇಶದೊಂದಿಗೆ ಪ್ರಾರಂಭವಾಗುವುದು.
ಇಂದು ಮಂಗಳವಾರ ಮುಂಜಾನೆ ತೀರ್ಥ ಸ್ನಾನ ಆರಂಭಗೊಂಡು, ಕದ್ರಿ ಶ್ರೀ ಯೋಗೀಶ್ವರ ಮಠಾಧಿಪತಿ ಶ್ರೀ ರಾಜಾ ನಿರ್ಮಲ್ ನಾಥಜೀಯವರಿಂದ ತೀರ್ಥ ಸ್ನಾನ ನೆರವೇರುವುದು. ಸಂಜೆ ಗಂಟೆ 6ಕ್ಕೆ ಏಳುಪಟ್ಟಣ ಮೊಗವೀರ ಮಹಾ ಸಭಾದವರಿಂದ ಧ್ವಜಸ್ತಂಭದ ಆರೋಹಣ, ಮಹಾಪೂಜೆ ಬಳಿಕ ಶ್ರೀ ಮಲರಾಯ ದೈವದ ಭಂಡಾರದ ಆಗಮನವಾಗುವುದು. ರಾತ್ರಿ 10ಕ್ಕೆ ಧ್ವಜಬಲಿ, ಕದ್ರಿ ಹತ್ತು ಸಮಸ್ತರಿಂದ ಗರುಡಾರೋಹಣ, ಉತ್ಸವಬಲಿ,ಭೂತಬಲಿ, ಕದ್ರಿ ಕೆಳಗಿನ ಮನೆಯವರಿಂದ ಕಂಚುದೀಪ ಬೆಳಗುವುದು, ದೀಪದಬಲಿ ಉತ್ಸವ , ಸಣ್ಣ ರಥೋತ್ಸವ, ತಪ್ಪಂಗಾಯಿ ನಡೆಯುವುದು.
15, ಬುಧವಾರ ರಾತ್ರಿ ಉತ್ಸವಬಲಿ,ದೀಪದಬಲಿ ಉತ್ಸವ,ಸಣ್ಣ ರಥೋತ್ಸವ ಜರಗಲಿರುವುದು.
ತಾ.16,ಗುರುವಾರ ಸಂಜೆ ಬಿಕರ್ನಕಟ್ಟೆ ಸವಾರಿ ಬಲಿ, ತಾ.17,ಶುಕ್ರವಾರ ಮಲ್ಲಿಕಟ್ಟೆ ಸವಾರಿ ಬಲಿ, ತಾ.18,ಶನಿವಾರ ಮುಂಡಾಣಕಟ್ಟೆ ಸವಾರಿ ಬಲಿ, ತಾ.19,ರವಿವಾರ ಕೊಂಚಾಡಿ ಸವಾರಿ ಬಲಿ, ಅಲ್ಲದೆ ತಾ.20,ಸೋಮವಾರ ಏಳನೇ ದೀಪೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದ್ದು , ತಾ.21, ಮಂಗಳವಾರ ದಂದು ಸಂಜೆ ” ಶ್ರೀ ಮನ್ಮಹಾರಥೋತ್ಸವ, ಬೆಳ್ಳಿರಥೋತ್ಸವ, ಚಂದ್ರಮಂಡಲ ಉತ್ಸವದ ಬಳಿಕ ಮಹಾಪೂಜೆ, ಭೂತಬಲಿ ಹಾಗೂ ಕವಾಟ ಬಂಧನ ನೆರವೇರುವುದು. ತಾ.22,ಬುಧವಾರ ಕವಾಟೋದ್ಘಾಟನೆ, ತುಲಾಭಾರ ಸೇವೆಗಳು ನಡೆಯಲಿದ್ದು, ರಾತ್ರಿ ಚಂದ್ರಮಂಡಲ ಉತ್ಸವ ಬಳಿಕ ಕದ್ರಿ ಹತ್ತು ಸಮಸ್ತರಿಂದ ಧ್ವಜಾವರೋಹಣಗೊಳ್ಳುವುದು.
ತಾ.24,ಶುಕ್ರವಾರ ಶ್ರೀ ಮಲರಾಯ ಹಾಗೂ ಪರಿವಾರ ದೈವಗಳ ನೇಮದೊಂದಿಗೆ ವರ್ಷಾವಧಿ ಜಾತ್ರೆ ಸಂಪನ್ನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು