1:01 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ

13/01/2025, 20:22

ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ ನೋಡಿ ಎಂದರು.
ನಾಯಕ ನಟ ಅಥರ್ವ ಪ್ರಕಾಶ್ ಮಾತನಾಡಿ,ನನ್ನ ಮೊದಲ ಸಿನಿಮಾ ತುಳುವಿನ ಚಾಲಿಪೋಲಿಲು, ನಂತರ ನಾನು ಎಂಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈ ಸಿನಿಮಾದಲ್ಲಿ ಬಹುತೇಕ ಎಲ್ಲರೂ ತುಳು ಕಲಾವಿದರೇ ಇದ್ದಾರೆ. ಸಿನಿಮಾದ ಕುರಿತು ನನಗೆ ಹೆಚ್ಚಿನ ನಿರೀಕ್ಷೆಯಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.
ನಾಯಕಿ ಪ್ರಾರ್ಥನಾ ಮಾತಾಡಿ, ನಾನು ಮಂಗಳೂರ ಹುಡುಗಿ. ಸಿನಿಮಾದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತುಳು ರಂಗಭೂಮಿಯ ಬಹುತೇಕ ಕಲಾವಿದರು ಸಿನಿಮಾದಲ್ಲಿದ್ದಾರೆ. ಎಲ್ಲರೂ ಚಿತ್ರತಂಡವನ್ನು ಪ್ರೋತ್ಸಾಹಿಸಿ ಎಂದರು.
ನಟ ಜ್ಯೋತಿಷ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಮಂಗಳೂರಿನ ಮಣ್ಣಿನ ಸೊಗಡು ಈ ಸಿನಿಮಾದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಎಂದರು.
ನಟರಾಜ್ ಸಿನಿಮಾ ನಿರ್ದೇಶನ ಮಾಡಿದ್ದು ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಕಲಾ ರಾವ್, ನಮಿತಾ ಇತರರು ಸಿನಿಮಾದ ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅನಿತಾ, ರವಿ ರಾಮಕುಂಜ, ರಾಜೇಶ್ ಸ್ಕೈ ಲಾರ್ಕ್ , ನಿರ್ಮಾಪಕಿ ಅನಿತಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು