5:45 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

13/01/2025, 23:46

ಬೆಂಗಳೂರು(reporterkarnataka.com): ಚಾಮರಾಜನಗರದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಆರೋಪಿಯನ್ನು ಪೊಲೀಸರು ರಾತೋರಾತ್ರಿ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೈಯದ್ ನಸ್ರು ಎಂದು ಗುರುತಿಸಲಾಗಿದೆ. ಕಾಟನ್​ಪೇಟೆ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಹಾಗೂ ಟೆಕ್ನಿಕಲ್ ಎವಿಡೆನ್ಸ್ ನ ಆಧಾರದ ಮೇಲೆ ಕಾಟನ್ ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬಂಧಿತ ಆರೋಪಿಯನ್ನು ರಾತ್ರಿಯೇ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೈಯದ್ ನಸ್ರು ಬೆಂಗಳೂರಿನ ಹಳೆ ಪೆನ್ಷನ್ ಮೊಹಲ್ಲದಲ್ಲಿ ನೆಲೆಸಿದ್ದಾನೆ. ಅಲ್ಲಿಂದ ಕೇವಲ 50 ಮೀಟರ್ ದೂರದಲ್ಲಿರುವ ಜಾಗದಲ್ಲಿ ಈ ಕೃತ್ಯ ಎಸಗಿದ್ದಾನೆ. ಪ್ಲಾಸ್ಟಿಕ್ ಹಾಗೂ ಬಟ್ಟೆ ಬ್ಯಾಗ್ ಹೊಲಿಯುವ ಸಣ್ಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲೇ ಮಲಗುತ್ತಿದ್ದ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು