3:24 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ

14/01/2025, 19:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಭೋವಿ ಜನಾಂಗದ ಮುಖಂಡರು ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಆಶೀರ್ವಚನ ನೀಡಿ ಶ್ರೀ ಸಿದ್ದರಾಮೇಶ್ವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳನ್ನು ತಿಳಿಸುತ್ತಾ ಶ್ರೀ ಸಿದ್ದರಾಮೇಶ್ವರರು ಉತ್ತಮ ವಚನಕಾರರು ಹಾಗೂ ಶಿವಶರಣರು ಆಗಿದ್ದರು. ಅವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ಗೆ ತಿಳಿಸುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವಂತೆ ತಿಳಿಸಿದರು.


ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಶ್ರೀ ಸಿದ್ದರಾಮೇಶ್ವರ ಜಯಂತಿ ಶುಭಾಶಯ ಕೋರಿದರು.
ಇದೇ ಸಂದರ್ಭ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೋವಿ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಮಾಜದ ಮುಖಂಡರಾದ ಲಿಂಗರಾಜು, ಪಾಪಣ್ಣ, ಮಹಾದೇವ್, ವಸಂತ, ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು