10:14 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು