11:14 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು