9:26 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು