7:33 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು