7:37 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ

14/01/2025, 21:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಹೇಳಿದ್ದಾರೆ.
ಅವರು ಹೇಳಿಕೆಯಲ್ಲಿ ತಿಳಿಸಿ ಕಳೆದ ವಾರ ಭೀಮ ಕೋರೆಗಾವ್ ವಿಜಯೋತ್ಸವವನ್ನು ಮೂಡಿಗೆರೆಯಲ್ಲಿ ಎಲ್ಲಾ ಜನಾಂಗ ಮತ್ತು ಪಕ್ಷದ ಪ್ರಮುಖರು ಸೇರಿಕೊಂಡು ವಿಜ್ರಂಭಣೆಯಿಂದ ಆಚರಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ಮಧ್ಯೆ ಅಂಬೇಡ್ಕರ್ ಧ್ಯೇಯ ಸಿದ್ಧಾಂತ, ಭೀಮಾ ಕೋರೆಗಾವ್ ಯುದ್ಧದ ಇತಿಹಾಸ ಮತ್ತು ದೇಶದ ಜನತೆಗೆ ಬಾಬಾಸಾಹೇಬರು ನೀಡಿದ ಕೊಡುಗೆಯನ್ನು ವಿಶ್ವಕ್ಕೆ ಸಾರಬೇಕಾದ ಹಾಗು ದಿನವು ಇವರ ಮಾನವಿಯ ಮೌಲ್ಯವನ್ನು ಹೆಚ್ಚಿಸಬೇಕಾದ ಈ ದಿನಗಳಲ್ಲಿ ಪ್ರಮುಖ ಭಾಷಣಕಾರ ಅಂದು ಸಮಾಜವನ್ನು ಒಡೆಯುವ ಮನಸ್ಥಿತಿಯ ಯೋಜನೆಯೊಂದಿಗೆ ಬಿಜೆಪಿ ಸಂಘ ಪರಿವಾರ ಮತ್ತು ಕೆಲವು ಜಾತಿ ಸಮಾಜದವರನ್ನು ದೋಷಿಸುವುದಕ್ಕೆ ಬಳಸಿಕೊಂಡಿದ್ದು ನಾಚಿಕೆಗೇಡು. ಇದು ಭಾರತರತ್ನಗೆ ಮಾಡಿದ ಅವಮಾನ. ವಿದೇಶಿಯರು ಮತ್ತು ಭಾರತೀಯರು ದೇಶಭಕ್ತ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಜಾತಿ ಮತ ಭೇದವಿಲ್ಲದೆ ಗೌರವ ನೀಡುತ್ತಿದ್ದು. ಇದೆಲ್ಲವನ್ನು ಗೊತ್ತಿದ್ದರು ಸಮಾಜ ಒಡೆಯುವ ಕಾರ್ಖಾನೆಯಲ್ಲಿ ಪಳಗಿಕೊಂಡು. ಇನ್ನೊಬ್ಬರ ಸಿದ್ದಾಂತದ ಅಳ ತಿಳಿಯದೆ ಪ್ರಶಸ್ತಿ. ಅಧಿಕಾರದ ಆಸೆಗೆ.ಮಲೆನಾಡಿನ ಒಗ್ಗಟ್ಟನ್ನು ಒಡೆಯುವ ಕುತಂತ್ರ ಮಾಡುತ್ತಿದ್ದು. ಜೊತೆಗೆ ಇವರಿಗೆ ಕುಮ್ಮಕ್ಕು ಕೊಡುವ ಮನಸ್ಥಿತಿಯವರು ಜೈಕಾರ ಹಾಕುತಿರುವುದು ಖಂಡನೀಯ. ದೇಶದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಅನಿಷ್ಠಗಳನ್ನು ಖಂಡಿಸುವ ಕಾರ್ಯವಾಗಬೇಕೆ ಹೊರತು ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು