6:54 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು