9:51 AM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು