8:45 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು