9:52 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

15/01/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ತೆರಳಿದ್ದಾರೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆನೆಯನ್ನು ಕಂಡ ಅಭಿಷೇಕ್ ಕಂದಕಕ್ಕೆ ಜಿಗಿದಿದ್ದರಿಂದ ಕಾಲು ಹಾಗೂ ಮೂಗಿನ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಯುನೈಟೆಡ್ ಮೀಡಿಯಾ ಎಂಬ ಯುಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು. ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣಕ್ಕೆ ಮಂಗಳವಾರ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ಆರೀಫ್ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಯಿತು. ಈ ಸಂದರ್ಭದಲ್ಲಿ ಆರೀಫ್, ನವೀನ್,
ಸಂಜಯ್ ಗೌಡ ಕೊಟ್ಟಿಗೆಹಾರ, ಗಿರೀಶ್, ಸುಂದರೇಶ, ಭಕ್ತಿ ಶ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು