5:14 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

15/01/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ತೆರಳಿದ್ದಾರೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆನೆಯನ್ನು ಕಂಡ ಅಭಿಷೇಕ್ ಕಂದಕಕ್ಕೆ ಜಿಗಿದಿದ್ದರಿಂದ ಕಾಲು ಹಾಗೂ ಮೂಗಿನ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಯುನೈಟೆಡ್ ಮೀಡಿಯಾ ಎಂಬ ಯುಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು. ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣಕ್ಕೆ ಮಂಗಳವಾರ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ಆರೀಫ್ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಯಿತು. ಈ ಸಂದರ್ಭದಲ್ಲಿ ಆರೀಫ್, ನವೀನ್,
ಸಂಜಯ್ ಗೌಡ ಕೊಟ್ಟಿಗೆಹಾರ, ಗಿರೀಶ್, ಸುಂದರೇಶ, ಭಕ್ತಿ ಶ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು