8:34 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ ಉತ್ತರಿಸಿ…

15/01/2025, 20:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಜಲರಾಶಿಯಿಂದ ಕೂಡಿದ ಸಮುದ್ರದ ದಂಡೆಯಲ್ಲೇ ಇರುವ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಇಂದು ನಿನ್ನೆಯದ್ದಲ್ಲ. 24× 7 ನೀರು ಕೊಡುತ್ತೇವೆ ಎಂದು ದಶಕಗಳಿಂದ ಆಡಳಿತರೂಢರು ಬೊಬ್ಬೆ ಹಾಕುತ್ತಿದ್ದರೂ ನೆಟ್ಟಗೆ 4 ತಾಸು ನೀರು ಕೊಡಲು ಸಾಧ್ಯವಾಗಿಲ್ಲ. ಇದೀಗ ಬ್ರಹ್ಮ ಬೈದರ್ಕುಳ ಗರೋಡಿ ಜಾತ್ರೆ ಮಹೋತ್ಸವದ ಸಂದರ್ಭದಲ್ಲಿಯೂ ಗರೋಡಿಯ ಮುಂಭಾಗದಲ್ಲಿರುವ ಮನೆಗೆಗಳಿಗೆ ನೀರಿಲ್ಲ.


ಕಳೆದ ಸುಮಾರು 5 ದಿನಗಳಿಂದ ಗರೋಡಿ ಎದುರುಗಡೆ ಇರುವ ಪ್ರದೇಶದಲ್ಲಿರುವ ಮನೆಗಳಿಗೆ ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಆಗುತ್ತಿಲ್ಲ. ಸ್ಥಳೀಯ ಕಾರ್ಪೋರೇಟರ್, ಇಂಜಿನಿಯರ್, ಕೊನೆಗೆ ಮೇಯರ್ ಅವರಿಗೆ ಹೇಳಿದರೂ ಪಾಲಿಕೆ ಆಡಳಿತ ನೀರು ಸರಬರಾಜು ಮಾಡುವಲ್ಲಿ ವಿಫಲವಾಗಿದೆ. ಇಂಜಿನಿಯರ್ ಅವರಲ್ಲಿ ಕೇಳಿದರೆ ನೀರನ್ನು ಸಿಟಿಗೆ ಡೈವರ್ಟ್ ಮಾಡಲಾಗಿದೆ. ಏನೂ ಮಾಡಲು ಸಾಧ್ಯವಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸುತ್ತಾರೆ. ಸಿಟಿಗೆ ಡೈವರ್ಟ್ ಮಾಡಿದ್ದೇವೆ ಅಂದ್ರೆ ಗರೋಡಿ ಇರುವ ಪ್ರದೇಶ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತದೆಯೇ? ಇಲ್ಲಿನ ಕಾರ್ಪೋರೇಟರ್ ಇಲ್ಲವೇ? ಮೇಯರ್ ಅಧಿಕಾರ ವ್ಯಾಪ್ತಿ ಇಲ್ಲಿಗೆ ಬರುವುದಿಲ್ಲವೇ? ಎಂಬ ನೂರಾರು ಪ್ರಶ್ನೆಗಳು ಉದ್ಭವಿಸುತ್ತದೆ. ಅಷ್ಟೇ ಅಲ್ಲದೆ, ಗರೋಡಿ ಪ್ರದೇಶದ ನೀರನ್ನು ಸಿಟಿಗೆ ಕೊಟ್ಟಿದ್ದೇವೆ ಅಂದ್ರೆ, ಒಬ್ಬನ ಹೊಟ್ಟೆಯ ಅನ್ನವನ್ನು ಕಸಿದು ಇನ್ನೊಬ್ಬನಿಗೆ ಉಣಿಸಿದ ಹಾಗೆ ಆಗುವುದಿಲ್ಲವೇ ಮೇಯರ್ ಅವರೇ? ಪಾಲಿಕೆಯದ್ದು ಇದು ಯಾವ ನೀತಿ?
ಸುಮಾರು 9 ದಿನಗಳ ಕಾಲ ನಡೆಯುವ ಗರೋಡಿ ಜಾತ್ರೆ ಅಂದ್ರೆ ಇಡೀ ಊರಿಗೆ ಸಂಭ್ರಮ. ಇಲ್ಲಿನ ಎಲ್ಲ ಮನೆಗಳಿಗೂ ಈ ಜಾತ್ರೆ ಸಮಯದಲ್ಲಿ ನೆಂಟರಿಷ್ಟರು ಬರುತ್ತಾರೆ. ಹೆಚ್ಚಿನ ಮನೆಗಳಲ್ಲಿ ಚಿಕನ್ ಸಾರು, ಚಿಕನ್ ಸುಕ್ಕ, ಕೋರಿ ರೊಟ್ಟಿ, ಕಬಾಬ್ ಸಮರಾಧನೆ ಆಗುತ್ತದೆ. ಆದರೆ ನೀರೇ ಇಲ್ಲ ಅಂದ್ರೆ ಈ ನಂಟರಿಗೆ ಸ್ಥಳೀಯರು ಆತಿಥ್ಯ ನೀಡುವುದಾದರೂ ಹೇಗೆ ಮೇಯರ್ ಅವರೇ?
ವಿಶೇಷವೆಂದರೆ ತುಂಬೆ ವೆಂಟೆಡ್ ಡ್ಯಾಮ್ ನಿಂದ ಮಂಗಳೂರು ನಗರದೊಳಗೆ ನೇತ್ರಾವತಿ ನೀರು ಸರಬರಾಜು ಆಗುವುದು ಇದೇ ನಾಗುರಿ ಗರೋಡಿ ಪ್ರದೇಶದ ಮೂಲಕವೇ. ಕಪ್ಪಗಿನ ದಪ್ಪ ಪೈಪ್ ಹೆಬ್ಬಾವಿನ ತರಹ ಇಲ್ಲಿ ಮಣ್ಣಿನೊಳಗೆ ಹಾಯಾಗಿ ಮಲಗಿವೆ.

ಪಾಲಿಕೆಯ ನೀರಿಲ್ಲದೆ ಗರೋಡಿ ಪ್ರದೇಶದ ಜನರು ಬಿಸ್ಲೆರಿ ಮಾದರಿಯ ನೀರು ಇದೀಗ ಉಪಯೋಗಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು