3:28 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ ಉತ್ತರಿಸಿ…

15/01/2025, 20:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಜಲರಾಶಿಯಿಂದ ಕೂಡಿದ ಸಮುದ್ರದ ದಂಡೆಯಲ್ಲೇ ಇರುವ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಇಂದು ನಿನ್ನೆಯದ್ದಲ್ಲ. 24× 7 ನೀರು ಕೊಡುತ್ತೇವೆ ಎಂದು ದಶಕಗಳಿಂದ ಆಡಳಿತರೂಢರು ಬೊಬ್ಬೆ ಹಾಕುತ್ತಿದ್ದರೂ ನೆಟ್ಟಗೆ 4 ತಾಸು ನೀರು ಕೊಡಲು ಸಾಧ್ಯವಾಗಿಲ್ಲ. ಇದೀಗ ಬ್ರಹ್ಮ ಬೈದರ್ಕುಳ ಗರೋಡಿ ಜಾತ್ರೆ ಮಹೋತ್ಸವದ ಸಂದರ್ಭದಲ್ಲಿಯೂ ಗರೋಡಿಯ ಮುಂಭಾಗದಲ್ಲಿರುವ ಮನೆಗೆಗಳಿಗೆ ನೀರಿಲ್ಲ.


ಕಳೆದ ಸುಮಾರು 5 ದಿನಗಳಿಂದ ಗರೋಡಿ ಎದುರುಗಡೆ ಇರುವ ಪ್ರದೇಶದಲ್ಲಿರುವ ಮನೆಗಳಿಗೆ ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಆಗುತ್ತಿಲ್ಲ. ಸ್ಥಳೀಯ ಕಾರ್ಪೋರೇಟರ್, ಇಂಜಿನಿಯರ್, ಕೊನೆಗೆ ಮೇಯರ್ ಅವರಿಗೆ ಹೇಳಿದರೂ ಪಾಲಿಕೆ ಆಡಳಿತ ನೀರು ಸರಬರಾಜು ಮಾಡುವಲ್ಲಿ ವಿಫಲವಾಗಿದೆ. ಇಂಜಿನಿಯರ್ ಅವರಲ್ಲಿ ಕೇಳಿದರೆ ನೀರನ್ನು ಸಿಟಿಗೆ ಡೈವರ್ಟ್ ಮಾಡಲಾಗಿದೆ. ಏನೂ ಮಾಡಲು ಸಾಧ್ಯವಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸುತ್ತಾರೆ. ಸಿಟಿಗೆ ಡೈವರ್ಟ್ ಮಾಡಿದ್ದೇವೆ ಅಂದ್ರೆ ಗರೋಡಿ ಇರುವ ಪ್ರದೇಶ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತದೆಯೇ? ಇಲ್ಲಿನ ಕಾರ್ಪೋರೇಟರ್ ಇಲ್ಲವೇ? ಮೇಯರ್ ಅಧಿಕಾರ ವ್ಯಾಪ್ತಿ ಇಲ್ಲಿಗೆ ಬರುವುದಿಲ್ಲವೇ? ಎಂಬ ನೂರಾರು ಪ್ರಶ್ನೆಗಳು ಉದ್ಭವಿಸುತ್ತದೆ. ಅಷ್ಟೇ ಅಲ್ಲದೆ, ಗರೋಡಿ ಪ್ರದೇಶದ ನೀರನ್ನು ಸಿಟಿಗೆ ಕೊಟ್ಟಿದ್ದೇವೆ ಅಂದ್ರೆ, ಒಬ್ಬನ ಹೊಟ್ಟೆಯ ಅನ್ನವನ್ನು ಕಸಿದು ಇನ್ನೊಬ್ಬನಿಗೆ ಉಣಿಸಿದ ಹಾಗೆ ಆಗುವುದಿಲ್ಲವೇ ಮೇಯರ್ ಅವರೇ? ಪಾಲಿಕೆಯದ್ದು ಇದು ಯಾವ ನೀತಿ?
ಸುಮಾರು 9 ದಿನಗಳ ಕಾಲ ನಡೆಯುವ ಗರೋಡಿ ಜಾತ್ರೆ ಅಂದ್ರೆ ಇಡೀ ಊರಿಗೆ ಸಂಭ್ರಮ. ಇಲ್ಲಿನ ಎಲ್ಲ ಮನೆಗಳಿಗೂ ಈ ಜಾತ್ರೆ ಸಮಯದಲ್ಲಿ ನೆಂಟರಿಷ್ಟರು ಬರುತ್ತಾರೆ. ಹೆಚ್ಚಿನ ಮನೆಗಳಲ್ಲಿ ಚಿಕನ್ ಸಾರು, ಚಿಕನ್ ಸುಕ್ಕ, ಕೋರಿ ರೊಟ್ಟಿ, ಕಬಾಬ್ ಸಮರಾಧನೆ ಆಗುತ್ತದೆ. ಆದರೆ ನೀರೇ ಇಲ್ಲ ಅಂದ್ರೆ ಈ ನಂಟರಿಗೆ ಸ್ಥಳೀಯರು ಆತಿಥ್ಯ ನೀಡುವುದಾದರೂ ಹೇಗೆ ಮೇಯರ್ ಅವರೇ?
ವಿಶೇಷವೆಂದರೆ ತುಂಬೆ ವೆಂಟೆಡ್ ಡ್ಯಾಮ್ ನಿಂದ ಮಂಗಳೂರು ನಗರದೊಳಗೆ ನೇತ್ರಾವತಿ ನೀರು ಸರಬರಾಜು ಆಗುವುದು ಇದೇ ನಾಗುರಿ ಗರೋಡಿ ಪ್ರದೇಶದ ಮೂಲಕವೇ. ಕಪ್ಪಗಿನ ದಪ್ಪ ಪೈಪ್ ಹೆಬ್ಬಾವಿನ ತರಹ ಇಲ್ಲಿ ಮಣ್ಣಿನೊಳಗೆ ಹಾಯಾಗಿ ಮಲಗಿವೆ.

ಪಾಲಿಕೆಯ ನೀರಿಲ್ಲದೆ ಗರೋಡಿ ಪ್ರದೇಶದ ಜನರು ಬಿಸ್ಲೆರಿ ಮಾದರಿಯ ನೀರು ಇದೀಗ ಉಪಯೋಗಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು