1:05 AM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ

16/01/2025, 20:54

ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1996ರಲ್ಲಿ ಪ್ರಾರಂಭವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು, ಉತ್ತಮ ಯೋಜನೆಗಳನ್ನು ಆರಂಭಿಸಿದೆ. ಗುಣಮಟ್ಟದ ಆರೋಗ್ಯ ಒದಗಿಸಲು ಇದು ಸಹಕಾರಿಯಾಗಿದೆ. ಬೆಳಗಾವಿ, ಕಲಬುರಗಿ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಹೆಚ್ಚು ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಪದ್ಧತಿಗಳನ್ನು ಆಧುನೀಕರಿಸಲು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳನ್ನು ಪರಿಚಯಿಸಿದ ಮೊದಲ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.
ಪ್ರತಿ ಪ್ರೋಗ್ರಾಂ ಮತ್ತು ಕೋರ್ಸ್‍ಗೆ ವಿಶಿಷ್ಟವಾದ ಮೌಲ್ಯಮಾಪನ ಬ್ಲೂಪ್ರಿಂಟ್ ಪ್ರಕಾರ ಸಮಗ್ರ ಪ್ರಶ್ನೆ ಬ್ಯಾಂಕ್ ಸ್ಥಾಪಿಸುವುದು ಈ ವಿವಿಯ ಗಮನಾರ್ಹ ಸಾಧನೆಯಾಗಿದೆ. ಮಂಗಳೂರಿನಲ್ಲಿ ಈ ಕೇಂದ್ರದ ಸ್ಥಾಪನೆಯು ಗ್ರಾಮೀಣ ಮತ್ತು ನಗರಗಳ ನಡುವಿನ ಆರೋಗ್ಯ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು