4:40 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ

16/01/2025, 20:54

ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1996ರಲ್ಲಿ ಪ್ರಾರಂಭವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು, ಉತ್ತಮ ಯೋಜನೆಗಳನ್ನು ಆರಂಭಿಸಿದೆ. ಗುಣಮಟ್ಟದ ಆರೋಗ್ಯ ಒದಗಿಸಲು ಇದು ಸಹಕಾರಿಯಾಗಿದೆ. ಬೆಳಗಾವಿ, ಕಲಬುರಗಿ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಹೆಚ್ಚು ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಪದ್ಧತಿಗಳನ್ನು ಆಧುನೀಕರಿಸಲು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳನ್ನು ಪರಿಚಯಿಸಿದ ಮೊದಲ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.
ಪ್ರತಿ ಪ್ರೋಗ್ರಾಂ ಮತ್ತು ಕೋರ್ಸ್‍ಗೆ ವಿಶಿಷ್ಟವಾದ ಮೌಲ್ಯಮಾಪನ ಬ್ಲೂಪ್ರಿಂಟ್ ಪ್ರಕಾರ ಸಮಗ್ರ ಪ್ರಶ್ನೆ ಬ್ಯಾಂಕ್ ಸ್ಥಾಪಿಸುವುದು ಈ ವಿವಿಯ ಗಮನಾರ್ಹ ಸಾಧನೆಯಾಗಿದೆ. ಮಂಗಳೂರಿನಲ್ಲಿ ಈ ಕೇಂದ್ರದ ಸ್ಥಾಪನೆಯು ಗ್ರಾಮೀಣ ಮತ್ತು ನಗರಗಳ ನಡುವಿನ ಆರೋಗ್ಯ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು