7:20 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ

16/01/2025, 20:54

ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1996ರಲ್ಲಿ ಪ್ರಾರಂಭವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು, ಉತ್ತಮ ಯೋಜನೆಗಳನ್ನು ಆರಂಭಿಸಿದೆ. ಗುಣಮಟ್ಟದ ಆರೋಗ್ಯ ಒದಗಿಸಲು ಇದು ಸಹಕಾರಿಯಾಗಿದೆ. ಬೆಳಗಾವಿ, ಕಲಬುರಗಿ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಹೆಚ್ಚು ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಪದ್ಧತಿಗಳನ್ನು ಆಧುನೀಕರಿಸಲು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳನ್ನು ಪರಿಚಯಿಸಿದ ಮೊದಲ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.
ಪ್ರತಿ ಪ್ರೋಗ್ರಾಂ ಮತ್ತು ಕೋರ್ಸ್‍ಗೆ ವಿಶಿಷ್ಟವಾದ ಮೌಲ್ಯಮಾಪನ ಬ್ಲೂಪ್ರಿಂಟ್ ಪ್ರಕಾರ ಸಮಗ್ರ ಪ್ರಶ್ನೆ ಬ್ಯಾಂಕ್ ಸ್ಥಾಪಿಸುವುದು ಈ ವಿವಿಯ ಗಮನಾರ್ಹ ಸಾಧನೆಯಾಗಿದೆ. ಮಂಗಳೂರಿನಲ್ಲಿ ಈ ಕೇಂದ್ರದ ಸ್ಥಾಪನೆಯು ಗ್ರಾಮೀಣ ಮತ್ತು ನಗರಗಳ ನಡುವಿನ ಆರೋಗ್ಯ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು