12:07 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ

16/01/2025, 20:54

ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1996ರಲ್ಲಿ ಪ್ರಾರಂಭವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು, ಉತ್ತಮ ಯೋಜನೆಗಳನ್ನು ಆರಂಭಿಸಿದೆ. ಗುಣಮಟ್ಟದ ಆರೋಗ್ಯ ಒದಗಿಸಲು ಇದು ಸಹಕಾರಿಯಾಗಿದೆ. ಬೆಳಗಾವಿ, ಕಲಬುರಗಿ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಹೆಚ್ಚು ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಪದ್ಧತಿಗಳನ್ನು ಆಧುನೀಕರಿಸಲು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳನ್ನು ಪರಿಚಯಿಸಿದ ಮೊದಲ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.
ಪ್ರತಿ ಪ್ರೋಗ್ರಾಂ ಮತ್ತು ಕೋರ್ಸ್‍ಗೆ ವಿಶಿಷ್ಟವಾದ ಮೌಲ್ಯಮಾಪನ ಬ್ಲೂಪ್ರಿಂಟ್ ಪ್ರಕಾರ ಸಮಗ್ರ ಪ್ರಶ್ನೆ ಬ್ಯಾಂಕ್ ಸ್ಥಾಪಿಸುವುದು ಈ ವಿವಿಯ ಗಮನಾರ್ಹ ಸಾಧನೆಯಾಗಿದೆ. ಮಂಗಳೂರಿನಲ್ಲಿ ಈ ಕೇಂದ್ರದ ಸ್ಥಾಪನೆಯು ಗ್ರಾಮೀಣ ಮತ್ತು ನಗರಗಳ ನಡುವಿನ ಆರೋಗ್ಯ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು