7:45 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಇಂದಿನಿಂದ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

17/01/2025, 07:13

ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಶಾಸಕ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರ ಉಪಸ್ಥಿತಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರಿನಲ್ಲಿ ಕ್ರೀಡೆಗಳಾದ ಬ್ಯಾಡ್ಮಿಂಟನ್, ಬಾಸ್ಕೆಟ್‍ಬಾಲ್, ಫೆನ್ಸಿಂಗ್ (ಕತ್ತಿವರಸೆ) ಫುಟ್ಬಾಲ್, ಹ್ಯಾಂಡ್‍ಬಾಲ್, ಖೋಖೋ, ನೆಟ್ಬಾಲ್, ಈಜು, ಟೇಕ್ವೊಂಡೋ, ವಾಲಿಬಾಲ್, ವೇಯ್ಟ್ ಲಿಫ್ಟಿಂಗ್, ವುಶು ಕ್ರೀಡಾಕೂಟ ಆಯೋಜಿಸಲಾಗಿದೆ.
ಆರ್ಚರಿ(ಬಿಲ್ಲುಗಾರಿಕೆ), ಅಥ್ಲೆಟಿಕ್ಸ್ , ಬಾಕ್ಸಿಂಗ್, ಸೈಕ್ಲಿಂಗ್, ಜುಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳನ್ನು ಉಡುಪಿ ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದು ಹಾಕಿ, ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್ ಕ್ರೀಡೆಗಳನ್ನು ಮಣಿಪಾಲದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದ ಸಮಾರೋಪ ಸಮಾರಂಭ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 23 ರಂದು ಸಂಜೆ 4:30 ಗಂಟೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು