1:24 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ನಾನು ‘ತುಳುವ’ ಎನ್ನುವುದೇ ನಂಗೆ ಹೆಮ್ಮೆ: ಮಂಗಳೂರಿನಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ

17/01/2025, 13:05

ಮಂಗಳೂರು(reporterkarnataka.com): ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳುನಾಡಿನ ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ ಎಂದು ಬಾಲಿವುಡ್ ಖ್ಯಾತ ನಟ ಸುನಿಲ್ ಶೆಟ್ಟಿ ಹೇಳಿದರು.
ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸೆ ಹಿಂದಿನಿಂದಲೂ ಇತ್ತು. ಆದರೆ ಕಾಲ ಕೂಡಿ ಬಂದಿರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಬರುತ್ತಿರುವ ಜೈ ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ನಟಿಸುತ್ತಿದ್ದೇನೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
ಕಾಮಿಡಿ ಸಿನಿಮಾಗಳಲ್ಲಿ ಅಭಿನಯ ಮಾಡಬೇಕು ಎನ್ನುವ ಆಸೆ ಇದೆ. ನನಗೆ ತುಳು ಸಿನಿಮಾದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಮಿಡಿಯನ್ ಆಗಿ ಅಭಿನಯಿಸಬೇಕು. ಆದರೆ ಈಗ ಜೈ ಸಿನಿಮಾದಲ್ಲಿ ಅತಿಥಿ ಪಾತ್ರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ನೋಡೋಣ ಎಂದು ಹೇಳಿದರು.
ಸುನಿಲ್ ಶೆಟ್ಟಿ ಅವರು ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಜೈ ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್ ನಡೆಯುತ್ತಿದೆ.
ಜೈ ಸಿನಿಮಾಕ್ಕೆ ಮೂರನೆ ಹಂತದ ಚಿತ್ರೀಕರಣ ನಡೆಯುತ್ತಿದ್ದು ಹಾಡಿನ ಚಿತ್ರೀಕರಣ ಇನ್ನು ನಡೆಯಲಿದೆ.
ಜೈ ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು ಸಿನಿಮಾಕ್ಕೆ ಕರಾವಳಿಯನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಉಡುಪಿ, ಕುಂದಾಪುರ ಮಂಗಳೂನಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತಿದ್ದು, ಅನಿಲ್ ಶೆಟ್ಟಿ,
ಸುಧಾಕರ್ ಶೆಟ್ಟಿ ಹಾಗೂ ಮಂಜುನಾಥ್ ಅತ್ತಾವರ ನಿರ್ಮಾಪಕರಾಗಿದ್ದು ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು ಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ, ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ಮಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ಪ್ರೊ ಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ರಾಜ್ ದೀಪಕ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ.


ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಜೈ ತುಳು ಚಿತ್ರ ಆದಷ್ಟು ಬೇಗ ತೆರೆಕಾಣಲಿದೆ.
ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಮಂಜುನಾಥ್ ಅತ್ತಾವರ, ರೂಪೇಶ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು