9:48 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ

17/01/2025, 17:13

ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ
ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದಾರೆ.


5 ಮಂದಿಯ ತಂಡ ಮಾಸ್ಕ್ ಧರಿಸಿ ಆಗಮಿಸಿದ್ದರು. ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಗನ್ ಮತ್ತು ತಲವಾರು ತೋರಿಸಿ ಸಹಕಾರಿ ಸಂಘದ ಸಿಬ್ಬಂದಿಗಳನ್ನು ಬೆದರಿಸಿ ನಗದು ಮತ್ತು ಚಿನ್ನಾಭರಣವನ್ನು ಗೋಣಿಯಲ್ಲಿ ತುಂಬಿಸಿ ಪರಾರಿಯಾಗಿದ್ದಾರೆ. ದರೋಡೆಕೋರರು ಮಂಗಳೂರಿನತ್ತ ಪರಾರಿಯಾಗಿದ್ದಾರೆ. ಕೋಟೆಕಾರು ಸಹಕಾರಿ ಸಂಘದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿತ್ತು ಎನ್ನಲಾಗಿದೆ.
ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು