7:33 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಾಳೂರು: ಯುವ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ ಹೃದಯಾಘಾತಕ್ಕೆ ಬಲಿ

17/01/2025, 21:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಹಾದಿಹೋಣಿ ಹೊಸ್ಮನೆಮಕ್ಕಿ ಗ್ರಾಮದ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ (35) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಚೇತನ್ ಅವರು ಗುರುವಾರ ಬೆಳಿಗ್ಗೆ ಮನೆಯೆದುರು ಕಾಫಿ ಕಣದಲ್ಲಿದ್ಧಾಗ ಹೃದಯಾಘಾತಕ್ಕೋಳಗಾಗಿ ಇದ್ದಕ್ಕಿದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಆಸ್ಪತ್ರೆಗೆ ಹೋಗುವ ದಾರಿಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಚೇತನ್ ಅವರು ಕೂವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಗೌಡ ಅವರ ಏಕೈಕ ಪುತ್ರ. ಚೇತನ್ ಪತ್ನಿ, ಇಬ್ಬರು ಇಬ್ಬರ ಚಿಕ್ಕ ಮಕ್ಕಳು, ತಂದೆ ತಾಯಿ, ಶತಾಯುಷಿಯಾಗಿರುವ ಅಜ್ಜಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬದ ಸದಸ್ಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಚೇತನ್ ಅವರು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು, ಸಾರ್ವಜನಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಸ್ನೇಹಜೀವಿಯಾಗಿದ್ದ ಚೇತನ್ ಬಾಳಿಬದುಕಬೇಕಾದ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಸ್ನೇಹಿತರು, ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು