8:32 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

17/01/2025, 22:36

ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಇಂದು ಸಂಭ್ರಮ- ಸಡಗರಕ್ಕೆ ಸಾಕ್ಷಿಯಾಯಿತು. ಸುಮಾರು 4500 ಕ್ರೀಡಾಪಟುಗಳ ಸಂಗಮದ ತಾಣವಾಯಿತು. ಇದಕ್ಕೆ ಕಾರಣ ಕರ್ನಾಟಕ ಕ್ರೀಡಾಕೂಟ 2025.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಕ್ರೀಡಾಕೂಟವನ್ನು ಆಯೋಜಿಸಿತ್ತು. ಸಿಎಂ ಜತೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಮಾತನಾಡಿ, ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಕರೆ ನೀಡಿದರು.‌
ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.


ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು