5:36 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

17/01/2025, 22:36

ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಇಂದು ಸಂಭ್ರಮ- ಸಡಗರಕ್ಕೆ ಸಾಕ್ಷಿಯಾಯಿತು. ಸುಮಾರು 4500 ಕ್ರೀಡಾಪಟುಗಳ ಸಂಗಮದ ತಾಣವಾಯಿತು. ಇದಕ್ಕೆ ಕಾರಣ ಕರ್ನಾಟಕ ಕ್ರೀಡಾಕೂಟ 2025.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಕ್ರೀಡಾಕೂಟವನ್ನು ಆಯೋಜಿಸಿತ್ತು. ಸಿಎಂ ಜತೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಮಾತನಾಡಿ, ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಕರೆ ನೀಡಿದರು.‌
ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.


ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು