3:41 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಖಾಸಗೀಕರಣ ಹೊಸ್ತಿಲಲ್ಲಿದ್ದ ವೈಜಾಗ್ ಸ್ಟೀಲ್ ಕಾರ್ಖಾನೆಗೆ (RINL) ಕೇಂದ್ರದಿಂದ ಜೀವದಾನ: 11,440 ಕೋಟಿ ರೂ. ಪುನಶ್ಚೇತನ ಪ್ಯಾಕೇಜ್

17/01/2025, 22:42

ನವದೆಹಲಿ(reporterkarnataka.com): ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.
ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ ದಿಟ್ಟ ಹೆಜ್ಜೆ ಇದಾಗಿದೆ ಎಂದರು.


ನವದೆಹಲಿ ಉಕ್ಕು ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಕುಮಾರಸ್ವಾಮಿ ಅವರು, ತಮ್ಮ ಇಲಾಖೆಯ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹಾಗೂ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮಮೋಹನ್ ನಾಯ್ಡು ಅವರ ಜತೆಗೂಡಿ ವೈಜಾಗ್ ಸ್ಟೀಲ್ ಪ್ಯಾಕೇಜ್ ಅನ್ನು ಘೋಷಣೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ವೈಜಾಗ್ ಸ್ಟೀಲ್ ಪುನಚ್ಚೆತನ ಪ್ಯಾಕೇಜ್ ಗೆ ಅನುಮೋದನೆ ನೀಡಲಾಗಿದೆ ಎಂದು ಉಕ್ಕು ಸಚಿವರು ಹೇಳಿದರು.
ಪ್ರಧಾನಿ ಮೋದಿ ಅವರು ಸಂಕ್ರಾಂತಿ ಹೊತ್ತಿಗೆ ಆಂಧ್ರ ಪ್ರದೇಶ ಜನತೆಗೆ ಶುಭ ಸುದ್ದಿ ಕೊಡುತ್ತೇವೆ ಎಂದು ಹೇಳಿದ್ದರು. ಅದರಂತೆ ವಿಶಾಖಪಟ್ಟಣ ಸ್ಟೀಲ್ ಕಾರ್ಖಾನೆಯ ಪುನಶ್ಚೇತನ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿಗಳಿಗೆ ಹಾಗೂ ನಮ್ಮ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸುವೆ ಎಂದು ಸಚಿವರು ಹೇಳಿದರು.

*ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ:*
ಕಾರ್ಖಾನೆಯ ಪುನಚ್ಚೆತನ ಪ್ಯಾಕೇಜ್ ನ ಪೂರ್ಣ ವಿವರಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಎಲ್ಲಾ ಮೂರು ಬ್ಲಾಸ್ಟ್ ಪರ್ನೆಸ್ ಗಳಿಗೆ ಚಾಲನೆ ಕೊಟ್ಟು ಕೆಲವೇ ತಿಂಗಳಲ್ಲಿ ಇಡೀ ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಉಕ್ಕು ಉತ್ಪಾದನೆಗೆ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಅಲ್ಲದೆ; ಕಾರ್ಖಾನೆ ಹೊಂದಿರುವ ಸಾಲವನ್ನು ಗಮನದಲ್ಲಿಟ್ಟುಕೊಂಡು ಉತ್ಪಾದನೆಯ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುತ್ತೇವೆ. ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ಮುಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
*ಎಷ್ಟು ಹೂಡಿಕೆ? ಏನು, ಎತ್ತ?:*
ವೈಜಾಗ್ ಸ್ಟೀಲ್ ಕಾರ್ಖಾನೆಗೆ ಈ ಪ್ಯಾಕೇಜ್ ನಲ್ಲಿ 10,300 ಕೋಟಿ ಹೂಡಿಕೆ ಮಾಡಲಾಗುವುದು ಹಾಗೂ 1,140 ಕೋಟಿಯನ್ನು ಷೇರು ರೂಪದಲ್ಲಿ ನಿರ್ವಹಣಾ ಬಂಡವಾಳವಾಗಿ ತೊಡಗಿಸಲಾಗುವುದು. ಈ 1,140 ಕೋಟಿಯನ್ನು ಹತ್ತು ವರ್ಷಗಳ ವರೆಗೂ ವಾಪಸ್ ಪಡೆಯಲು ಅವಕಾಶ ಇರುವುದಿಲ್ಲ. ಇದು ಮಹತ್ವದ ನಿರ್ಧಾರ ಆಗಿದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ಕಾರ್ಖಾನೆಯನ್ನು ಅತ್ಯಂತ ದಕ್ಷತೆ, ಕ್ಷಮತೆಯಿಂದ ಮುನ್ನಡೆಸುತ್ತೇವೆ. ಇದು ಸಂಪೂರ್ಣವಾಗಿ ಸರಕಾರಿ ಸ್ವಾಮ್ಯದ ಕೈಗಾರಿಕೆಯಾಗಿದೆ. ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಸಂಘಟಿತ ಪ್ರಯತ್ನ ನಡೆಸಿದ್ದೇವೆ. ಸಮುದ್ರ ದಂಡೆಯಲ್ಲಿರುವ ದೇಶದ ಅತ್ಯಂತ ವ್ಯೂಹಾತ್ಮಕ ಉಕ್ಕು ಸ್ಥಾವರವನ್ನು ರಕ್ಷಿಸಿಕೊಳ್ಳಲು ಹಾಗೂ ನಿರೀಕ್ಷಿತ ಗುರಿಗಳನ್ನು ಮುಟ್ಟಲು ನಾವು ಶ್ರಮಿಸುತ್ತೇವೆ ಎಂದು ಅವರು ಹೇಳಿದರು.
2025 ಜನವರಿ ವೇಳೆಗೆ ಎರಡು ಬ್ಲಾಸ್ಟ್ ಫರ್ನೇಸ್‌ಗಳೊಂದಿಗೆ ಮತ್ತು ಆಗಸ್ಟ್ 2025 ರ ವೇಳೆಗೆ ಮೂರು ಬ್ಲಾಸ್ಟ್ ಫರ್ನೇಸ್‌ಗಳೊಂದಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಯೋಜಿಸಿದ್ದೇವೆ. ದೇಶೀಯ ಉಕ್ಕು ಉತ್ಪಾದನೆ ಹಾಗೂ ಉಕ್ಕು ಮಾರುಕಟ್ಟೆಗೆ ಈ ಕ್ರಮ ದೊಡ್ಡ ಕೊಡುಗೆ ನೀಡುತ್ತದೆ. ಮುಖ್ಯವಾಗಿ ಸಾವಿರಾರು ಉದ್ಯೋಗಿಗಳು ಮತ್ತು ಅವರ ಅವಲಂಬಿತರ ಜೀವನೋಪಾಯಕ್ಕೆ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
*2030ರ ಹೊತ್ತಿಗೆ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ:*
ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿಯನ್ನು ನಿಗದಿ ಮಾಡಿದ್ದಾರೆ. ಈ ಗುರಿ ಮುಟ್ಟಬೇಕಾದರೆ ಅನೇಕ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ವೈಜಾಗ್ ಸ್ಟೀಲ್ ಪುನಚ್ಚೆತನ ಯೋಜನೆಯನ್ನು ಇದೇ ಉದ್ದೇಶದಿಂದ ರೂಪಿಸಲಾಗಿದೆ. ದೇಶೀಯ ಉಕ್ಕು ಉದ್ಯಮಕ್ಕೆ ಈ ಕಾರ್ಖಾನೆಯ ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದರು.
ವಿಶಾಖಪಟ್ಟಣ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನ ಮಾಡಬೇಕು ಎಂಬುದು ಆಂಧ್ರ ಪ್ರದೇಶ ಜನರ ಬಹುಕಾಲದ ಬೇಡಿಕೆ ಆಗಿತ್ತು. ನಾನು ಉಕ್ಕು ಸಚಿವನಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ನನ್ನ ಮೊದಲ ಅಧಿಕೃತ ಭೇಟಿಯನ್ನು ಈ ಕಾರ್ಖಾನೆಗೆ ನೀಡಿದೆ. ಇಡೀ ಕಾರ್ಖಾನೆ ವೀಕ್ಷಣೆ ಜತೆಗೆ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘಟನೆಗಳ ಜತೆ ಸಭೆ ನಡೆಸಿದ್ದೆ ಎಂದು ಅವರು ಹೇಳಿದರು.

*ವೈಜಾಗ್ ಸ್ಟೀಲ್ ಉಳಿಸಲು HDK ಇಟ್ಟ ಹೆಜ್ಜೆಗಳು:*
•2024 ಜೂನ್ ತಿಂಗಳಲ್ಲಿ ಸಾಲ ಪಾವತಿ ಮಾಡಲಾಗದೆ ಕಾರ್ಖಾನೆ ಸುಸ್ತಿ

•2024 ಜುಲೈ 11ರಂದು ವೈಜಾಗ್ ಸ್ಟೀಲ್ ಗೆ ಭೇಟಿ. ಆಗ ಕೇವಲ 3 ಬ್ಲಾಸ್ಟ್ ಪರ್ನ್ ನೇಸ್ ಗಳ ಪೈಕಿ ಕೇವಲ ಒಂದು ಚಾಲನೆಯಲ್ಲಿತ್ತು

•2024 ಜುಲೈನಲ್ಲಿ ಎಸ್ ಬಿಐ ಸೇರಿ ಸಾಲ ನೀಡಿದ್ದ ಬ್ಯಾಂಕ್ ಗಳ ಜತೆ ಸಭೆ

•2024 ಆಗಸ್ಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನಿ ಮೋದಿ ಅವರ ಜತೆ ವೈಜಾಗ್ ಸ್ಟೀಲ್ ಪುನಚ್ಚೆತನ ಬಗ್ಗೆ ಮಾತುಕತೆ

•2024 ಸೆಪ್ಟೆಂಬರ್ ನಲ್ಲಿ 500 ಕೋಟಿ ಬಿಡುಗಡೆ

•2024 ಸೆಪ್ಟೆಂಬರ್ 29ರಂದು ವಜಾ ಆಗಿದ್ದ 48 ಗಂಟೆಗಳ ಒಳಗಾಗಿ 4,200 ಗುತ್ತಿಗೆ ಕಾರ್ಮಿಕರ ಮರು ನೇಮಕ

•2024 ಸೆಪ್ಟೆಂಬರ್ ನಲ್ಲಿ ಎರಡು ಬ್ಲಾಸ್ಟ್ ಪರ್ನ್ ನೇಸ್ ಗಳ ಮರು ಕಾರ್ಯಾರಂಭ

•2024 ಅಕ್ಟೋಬರ್ 9ರಂದು ಆಂಧ್ರ ಪ್ರದೇಶ ಸಿಎಂ, ಕೇಂದ್ರ ವಿತ್ತ ಸಚಿವರ ಜತೆ ಮಹತ್ವದ ಸಭೆ

•ಎಸ್ ಬಿಐ, ಮಿಕಾನ್ ಗಳಿಂದ ಕಾರ್ಖಾನೆ ಪುನಚ್ಚೆತನ ಯೋಜನೆಗೆ ಸಾಧ್ಯತಾ ವರದಿ ಸ್ವೀಕರಿಸಿದ ಸಚಿವರು

•2024 ಡಿಸೆಂಬರ್ ನಲ್ಲಿ ಮತ್ತೆ ಆಂಧ್ರ ಸಿಎಂ ಜತೆ ಸಭೆ, ಅದಾಗಲೇ 2 ಬ್ಲಾಸ್ಟ್ ಪರ್ನ್ ನೇಸ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಣೆ

•2025 ಜನವರಿ 16ರಂದು ಕೇಂದ್ರದಿಂದ ವೈಜಾಗ್ ಸ್ಟೀಲ್ ಪುನಚ್ಚೆತನ ಪ್ಯಾಕೇಜ್

ಇತ್ತೀಚಿನ ಸುದ್ದಿ

ಜಾಹೀರಾತು