12:07 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ: ಸಕಲ ಸಿದ್ಧತೆ ಬಹುತೇಕ ಪೂರ್ಣ

18/01/2025, 15:40

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಚೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು.

ನಂತರ ಮಾತನಾಡಿದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಜನವರಿ 18 ರಿಂದ 22 ರ ವರೆಗೆ 5 ದಿನಗಳ ಕಾಲ ನಡೆಯಲಿರುವ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಪಟ್ಟ ಯಾವುದೇ ಮಾಹಿತಿಗಾಗಿ ಮಳಿಗೆದಾರರು, ಸಾರ್ವಜನಿಕರು, ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.
ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಿಸಿದಂತೆ ಈಗಾಗಲೇ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಚಾಯ್ ವಾಲಾ ಡಾಲಿ ಎಲ್ಲರ ಪ್ರಮುಖ ಆಕರ್ಷಣೆ ಕೇಂದ್ರವಾಗಿದ್ದು ಇದೇ ರೀತಿಯ ಅನೇಕ ವಿಶಿಷ್ಟಗಳು ಈ ಬಾರಿ ಇರಲಿದೆ. ಜನವರಿ 18ರ ಸಂಜೆ 6 ಗಂಟೆಗೆ ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಅದ್ದೂರಿ ಚಾಲನೆ ದೊರೆಯಲಿದೆ ಎಂದರು.
ಆನ್ ಲೈನ್ ಮೂಲಕ ನೂರಾರು ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕಳೆದೆರಡು ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ಇನ್ನಷ್ಟು ಮನರಂಜನಾ ಕಾರ್ಯಕ್ರಮಗಳ ಜೊತೆಗೆ ಮತ್ತಷ್ಟು ಹೊಸತನಗಳು ಇರಲಿದೆ. ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ, ಪಾರ್ಕಿಂಗ್, ಸಹಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಆದ್ಯತೆ ನೀಡಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಉದ್ಘಾಟನಾ ಸಮಾರಂಭದಲ್ಲಿ ಪ್ರತಿಷ್ಠಾನದ ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ , ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು