10:48 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ: ಸಕಲ ಸಿದ್ಧತೆ ಬಹುತೇಕ ಪೂರ್ಣ

18/01/2025, 15:40

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಚೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು.

ನಂತರ ಮಾತನಾಡಿದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಜನವರಿ 18 ರಿಂದ 22 ರ ವರೆಗೆ 5 ದಿನಗಳ ಕಾಲ ನಡೆಯಲಿರುವ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಪಟ್ಟ ಯಾವುದೇ ಮಾಹಿತಿಗಾಗಿ ಮಳಿಗೆದಾರರು, ಸಾರ್ವಜನಿಕರು, ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.
ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಿಸಿದಂತೆ ಈಗಾಗಲೇ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಚಾಯ್ ವಾಲಾ ಡಾಲಿ ಎಲ್ಲರ ಪ್ರಮುಖ ಆಕರ್ಷಣೆ ಕೇಂದ್ರವಾಗಿದ್ದು ಇದೇ ರೀತಿಯ ಅನೇಕ ವಿಶಿಷ್ಟಗಳು ಈ ಬಾರಿ ಇರಲಿದೆ. ಜನವರಿ 18ರ ಸಂಜೆ 6 ಗಂಟೆಗೆ ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಅದ್ದೂರಿ ಚಾಲನೆ ದೊರೆಯಲಿದೆ ಎಂದರು.
ಆನ್ ಲೈನ್ ಮೂಲಕ ನೂರಾರು ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕಳೆದೆರಡು ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ಇನ್ನಷ್ಟು ಮನರಂಜನಾ ಕಾರ್ಯಕ್ರಮಗಳ ಜೊತೆಗೆ ಮತ್ತಷ್ಟು ಹೊಸತನಗಳು ಇರಲಿದೆ. ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ, ಪಾರ್ಕಿಂಗ್, ಸಹಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಆದ್ಯತೆ ನೀಡಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಉದ್ಘಾಟನಾ ಸಮಾರಂಭದಲ್ಲಿ ಪ್ರತಿಷ್ಠಾನದ ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ , ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು