4:33 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ

18/01/2025, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು.
ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ಅಕ್ಕನ ಮನೆಯಲ್ಲಿ ಬೆಳಿಗ್ಗೆ 8.45.ಕ್ಕೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ.
ಅವರು ಒಬ್ಬ ಸಹೊದರ ಹಾಗೂ ಇಬ್ಬರು  ಸಹೊದರಿಯರನ್ನು ಅಗಲಿದ್ದಾರೆ.
ಅವಿವಾಹಿತರಾಗಿದ್ದ ಮೃತರು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಮತ್ತು ತಾವೇ ಯುವ ಜಾಗೃತ ಮತದಾರರ ವೇದಿಕೆಯನ್ನು ಹುಟ್ಟು ಹಾಕಿ ಅದರ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದರು. ಮಲೆನಾಡು ಭಾಗದ ಅನೇಕ ಯುವಕ ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳಲ್ಲಿ ಕೆಲಸ ಕೊಡಿಸಿದ್ದರು. ಯುವಕರಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಇವರನ್ನು ಇವರ ಸ್ನೇಹಿತರ ಬಳಗ ಪ್ರೀತಿಯಿಂದ ಗುರೂಜಿ ಎಂದೆ ಕರೆಯುತ್ತಿದ್ದರು.
ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬದವರು ಮತ್ತು ಸ್ನೇಹಿತರ ಬಳಗ ತೀವ್ರ ಅಘಾತಕ್ಕೆ ಒಳಗಾಗಿದ್ದಾರೆ
ಇಂದು ಶನಿವಾರ ಸಂಜೆ ಅವರ ಹುಟ್ಟೂರು ಮೂಡಿಗೆರೆ ಸಮೀಪದ ಪಲ್ಗುಣಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು