11:52 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಚಿವ ರಾಜಣ್ಣರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮನುಸ್ಮೃತಿ ಪಾಠ; ಕೊನೆಗೆ ನಗೆಚಟಾಕಿ

18/01/2025, 21:30

ತುಮಕೂರು(reporterkarnataka.com):ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.
ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು.
ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು.
ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.
ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು “ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು