6:53 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆ ಮಟ್ಟಕ್ಕೇರಿಸಲು ಯೋಜನೆ ತಯಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

18/01/2025, 22:28

ಬೆಳ್ತಂಗಡಿ(reporterkarnataka.com):ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು.
ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕು ಆಸ್ಪತ್ರೆಗಳಲ್ಲಿಯೇ ನೀಡುವ ಮೂಲಕ ಜನರ ಸಮೀಪಕ್ಕೆ ಆರೋಗ್ಯ ಸೇವೆಗಳನ್ನ ಒದಗಿಸುತ್ತ ಮುಂಬರುವ ಬಜೆಟ್ ನಲ್ಲಿ ಮಹತ್ವದ ಯೋಜನೆ ಘೋಷಣೆಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌
ಈ ನಿಟ್ಟಿನಲ್ಲಿ ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಗಳಿಗೆ ಬರುವ ಜನರಿಗೆ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಅಲ್ಲದೇ ತಜ್ಞ ವೈದ್ಯರಿಗೆ ಬೇಕಾಗುವ ಎಲ್ಲ ವೈದ್ಯಕೀಯ ಪರಿಕರಿಗಳನ್ನ ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿಯೂ ಒದಗಿಸಲಿದೆ. ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಚ್ಚನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡವನ್ನ ನಾಲ್ಕು ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 11 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕಟ್ಟಡ ದುರಸ್ಥಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ವಿಸ್ತ್ರತವಾದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
*ಬಿಜೆಪಿ ಶಾಸಕ ಹರೀಶ್ ಪುಂಜಾಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು:*
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ತಿಂಗಳಿನಿಂದ 10 ಸಾವಿರ ಮುಂಗಡವಾಗಿ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸುವ ಕಾರ್ಯ ಮಾಡಬೇಕು. ನೀವು, ನಿಮ್ಮ ಸಂಸದರು ಕೇಂದ್ರದಲ್ಲಿ ಪ್ರಭಾವ ಬಳಸಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ವಿಸುವಂತೆ ಒತ್ತಾಯಿಸಿ ಎಂದು ಶಾಸಕ ಹರೀಶ್ ಪೂಂಜ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 5 ಸಾವಿರ ಗೌರವಧನ ನೀಡುತ್ತಿದೆ. ಕೇಂದ್ರ ಸರ್ಕಾರ 3 ಸಾವಿರ ನೀಡುತ್ತಿದ್ದು , ಅದರಲ್ಲೂ ಶೇ 40 ರಷ್ಟು ಪಾಲನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಪ್ರತಿ ಬಾರಿ ರಾಜ್ಯ ಸರ್ಕಾರ ಗೌರವಧನ ಹೆಚ್ಚಳ ಮಾಡಿಕೊಂಡು ಬರುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳವಾಗಿಯೇ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ವಯೋ ವಂದನ ಯೋಜನೆ ಅನುಷ್ಠಾನ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೆಲವು ಸ್ಪಷ್ಟನೆ ಕೇಳಿ ನವೆಂಬರ್ ತಿಂಗಳಿನಲ್ಲಿಯೇ ಪತ್ರ ಬರೆಯಲಾಗಿದೆ. ಕೇಂದ್ರದಿಂದ ಇನ್ನೂ ಉತ್ತರ ದೊರೆತಿಲ್ಲ. ಆಯುಷ್ಮಾನ್ ಭಾರತ್ ಯೋಜನೆಯ ಪ್ರಕಾರ ಶೇ 60 ರಷ್ಟು ಕೇಂದ್ರ ಹಾಗೂ ಶೇ 40 ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಬೇಕು. ಆದರೆ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಶೇ 75 ರಷ್ಟು ಅನುದಾನದ ಪಾಲನ್ನ ಭರಿಸುತ್ತಿದ್ದು, ಶೇ 25 ರಷ್ಟು ಅನುದಾನವನ್ನು ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಜೋಡಿಸಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ 65 ಲಕ್ಷ ಕುಟುಂಬಗಳನ್ನ ಮಾತ್ರ ಈ ಯೋಜನೆಗೆ ಪರಿಗಣಿಸಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳನ್ನ ಯೋಜನೆಯ ವ್ಯಾಪ್ತಿಗೆ ತಂದಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಲಾಭ ಪಡೆಯಬಹುದಾಗಿದೆ.. ಈ ಎಲ್ಲ ವಿಚಾರಗಳ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಕ್ಕ ಬಳಿಕ ವಯೋ ವಂದನ ಯೋಜನೆಯನ್ನ ರಾಜ್ಯ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು