11:37 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಶ್ರೀ ವೆಂಕಟ್ರಮಣ ದೇವರ ನೂತನ ಚಂದ್ರ ಮಂಡಲ ವಾಹನ ಹಸ್ತಾಂತರ

19/01/2025, 21:44

ಮಂಗಳೂರು(reporterkarnataka.com): ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಇಂದು ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ನಡೆಯಿತು.
ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು .
ಜನವರಿ 20 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ . ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ ಪ್ರಯುಕ್ತ ಆಯೋಜಿಸಲಾದ ಶ್ರೀ ಗುರು ಪಾದುಕಾ ಯಾತ್ರೆಯ ಪುರಪ್ರವೇಶ ಹಾಗೂ ಮಂಗಳೂರು ರಥೋತ್ಸವ ಪ್ರಯುಕ್ತ ಶ್ರೀ ದೇವಳಕ್ಕೆ ಆಗಮಿಸಲಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಂದು ರಾತ್ರಿ 7 ಗಂಟೆಗೆ ಸರಿಯಾಗಿ ಡೊಂಗರಕೇರಿಯಲ್ಲಿರುವ ಕೆನರಾ ಹೈ ಸ್ಕೂಲ್ ಬಳಿಯಿಂದ ಮೆರವಣಿಗೆ ಹೊರತು ಡೊಂಗರಕೇರಿ , ನ್ಯೂ ಚಿತ್ರಾ ಜಂಕ್ಷನ್ ಮೂಲಕ ಬಿ . ಎಂ . ಹೈಸ್ಕೂಲ್ ರಸ್ತೆ , ರಥಬೀದಿ ಮೂಲಕ ಶ್ರೀ ದೇವಳಕ್ಕೆ ಭವ್ಯ ಮೆರವಣಿಗೆ ತಲುಪಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು